• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಅಣ್ಣಾಮಲೈ ಆಯ್ತು ಈಗ ಸಸಿಕಾಂತ್ ಸೆಂಥಿಲ್ ರಾಜೀನಾಮೆ;ಕಾರಣವೇನು ಗೊತ್ತಾ..?

Kiran K by Kiran K
in Vijaya Time
ಅಣ್ಣಾಮಲೈ ಆಯ್ತು ಈಗ ಸಸಿಕಾಂತ್ ಸೆಂಥಿಲ್ ರಾಜೀನಾಮೆ;ಕಾರಣವೇನು ಗೊತ್ತಾ..?
0
SHARES
13
VIEWS
Share on FacebookShare on Twitter

ಮಂಗಳೂರು, ಸೆ. 6: ದಕ್ಷಿಣ ಕನ್ನಡದಲ್ಲಿ ಸಸಿಕಾಂತ್ ಸೆಂಥಿಲ್ ಅಂದ್ರೆ ಸಾಕು ಪ್ರಾಮಾಣಿಕತೆಗೆ ಹಾಗೂ ನಿಷ್ಟೆಗೆ ಹೆಸರು ಮಾಡಿದ ಅಧಿಕಾರಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ದಕ್ಷಿಣ ಕನ್ನಡಕ್ಕೆ ಡಿಸಿ ಆಗಿ ಅಧಿಕಾರಕ್ಕೆ ಬಂದು ಸರಿಸುಮಾರು 2 ವರ್ಷವಾಗುತ್ತಾ ಬಂದರೂ ಗಳಿಸಿದ್ದ ಹೆಸರಿಗೆ ಕೊಂಚವೂ ಚ್ಯುತಿ ಬಂದಿರಲಿಲ್ಲ.. ಆದರೆ ಇಂದು ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ರವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆಯ ನಂತರ ಪ್ರತಿಷ್ಠಿತ ಹುದ್ದೆಯಲ್ಲಿದ್ದ ಅಧಿಕಾರಿಯೊಬ್ಬರು ಹೀಗೆ ಏಕಾಏಕಿ ರಾಜೀನಾಮೆ ನೀಡಿರುವ ಘಟನೆ ಇದಾಗಿದೆ.

ಎಂಜಿನಿಯರಿಂಗ್ ಪದವೀಧರರಾಗಿರುವ ಸೆಂಥಿಲ್ ರವರು ವಿದ್ಯಾಭ್ಯಾಸದ ನಂತರ ಹೆಸರಾಂತ ಕಂಪನಿಯೊಂದರಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಿದ್ದರು. ಆದರೆ ಸಿವಿಲ್ ಸರ್ವೀಸ್ ಕನಸು ಹೊತ್ತಿದ್ದ ಅವರು ವೃತ್ತಿಗೆ ರಾಜೀನಾಮೆ ಕೊಟ್ಟು, ತಮ್ಮ ಕನಸಿನ ಬೆನ್ನು ಹತ್ತಿದ್ದರು. ಇದರ ಫಲವಾಗಿ 2009ನೇ ಸಾಲಿನಲ್ಲಿ ತಮಿಳುನಾಡಿನ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದರು. ನಂತರದ ದಿನಗಳಲ್ಲಿ ಬಳ್ಳಾರಿಯಲ್ಲಿ ಅಸಿಸ್ಟೆಂಟ್ ಕಮಿಷನರ್, ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್, ಚಿತ್ರದುರ್ಗ ಹಾಗೂ ರಾಯಚೂರಿನಲ್ಲಿ ಡೆಪ್ಯುಟಿ ಕಮಿಷನರ್ ಆಗಿ ಸೇವೆ ಸಲ್ಲಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮವಾಗುವ ಮುನ್ನ ಮೈನ್ಸ್ ಹಾಗೂ ಜಿಯಾಲಜಿ ವಿಭಾಗದಲ್ಲಿ ನಿರ್ದೇಶಕರಾಗಿ ಸಸಿಕಾಂತ್ ಸೆಂಥಿಲ್‍ರವರು ಕರ್ತವ್ಯ ನಿರ್ವಹಿಸಿದ್ದರು.

ಇಷ್ಟೆಲ್ಲಾ ಅನುಭವಗಳನ್ನು ಹೊಂದಿದ್ದ ಸೆಂಥಿಲ್‍ರವರು ಸದ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ. ವೈಯಕ್ತಿಕ ಕಾರಣಗಳಿಂದಾಗಿ ಅವರು ಐಎಎಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾಗಿ ಬಲ್ಲ ಮೂಲಗಳು ತಿಳಿಸಿವೆಯಾದರೂ ಖಚಿತ ಮಾಹಿತಿ ಲಭ್ಯವಾಗಬೇಕಿದೆ.

ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿಯುತ್ತಿದೆ. ಭವಿಷ್ಯದಲ್ಲಿ ಮತ್ತಷ್ಟು ಅಡೆತಡೆ ಬರುವ ಸಂಭವವಿದೆ. ಆದ್ದರಿಂದ ನನ್ನ ವೈಯಕ್ತಿಕ ವಿಚಾರದಿಂದಾಗಿ ರಾಜೀನಾಮೆ ಕೊಟ್ಟಿದ್ದೇನೆ. ಜಿಲ್ಲೆಯ ವಿಚಾರದಲ್ಲಿ ತನ್ನ ರಾಜೀನಾಮೆ ತಳುಕು ಹಾಕೋದು ಬೇಡ ಎಂಬುದಾಗಿ ಸೆಂಥಿಲ್ ತಮ್ಮ ರಾಜೀನಾಮೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಅದೇನೇ ಆದರೂ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ರವರ ರಾಜೀನಾಮೆ ಭಾರೀ ಕುತೂಹಲಕ್ಕೆ ಕಾರಣವಾಗಿದ್ದು, ರಾಜಕೀಯ ಒತ್ತಡವಿತ್ತಾ..? ಅಥವಾ ವೈಯಕ್ತಿಕ ವಿಚಾರವೇ ಎಂಬುದು ಇನ್ನೂ ತಿಳಿಯಬೇಕಿದೆ.

Related News

ಮೇಕೆದಾಟು ವಿವಾದಕ್ಕೆ ಹೊಸ ತಿರುವು: ಕರ್ನಾಟಕದ ಪರ ಕೇಂದ್ರ ಸರ್ಕಾರದ ನಿಲುವು
Vijaya Time

ಮೇಕೆದಾಟು ವಿವಾದಕ್ಕೆ ಹೊಸ ತಿರುವು: ಕರ್ನಾಟಕದ ಪರ ಕೇಂದ್ರ ಸರ್ಕಾರದ ನಿಲುವು

July 28, 2026
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಕೇಂದ್ರದ ಮಹತ್ವದ ಹೆಜ್ಜೆ: ನಂದನ್ ನೀಲೆಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ
Vijaya Time

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಕೇಂದ್ರದ ಮಹತ್ವದ ಹೆಜ್ಜೆ: ನಂದನ್ ನೀಲೆಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ

July 27, 2026
ರಾಜ್ಯಾದ್ಯಂತ ಇಂದಿನಿಂದ SIR ಪ್ರಕ್ರಿಯೆ ಆರಂಭ: ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ ತುಂಬಿ,ಮತದಾನದ ಹಕ್ಕು ಉಳಿಸಿಕೊಳ್ಳಿ ಎಂದ ಸಿಎಂ
Vijaya Time

ರಾಜ್ಯಾದ್ಯಂತ ಇಂದಿನಿಂದ SIR ಪ್ರಕ್ರಿಯೆ ಆರಂಭ: ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ ತುಂಬಿ,ಮತದಾನದ ಹಕ್ಕು ಉಳಿಸಿಕೊಳ್ಳಿ ಎಂದ ಸಿಎಂ

June 30, 2026
ಇರಾನ್‌ಗೆ ಪ್ರಯಾಣ ಬೇಡ, ಅಲ್ಲಿರುವ ಭಾರತೀಯರು ತಕ್ಷಣ ವಾಪಸ್ ಬನ್ನಿ: ಭಾರತೀಯ ರಾಯಭಾರಿ ಕಚೇರಿಯಿಂದ ತುರ್ತು ಸೂಚನೆ
Vijaya Time

ಇರಾನ್‌ಗೆ ಪ್ರಯಾಣ ಬೇಡ, ಅಲ್ಲಿರುವ ಭಾರತೀಯರು ತಕ್ಷಣ ವಾಪಸ್ ಬನ್ನಿ: ಭಾರತೀಯ ರಾಯಭಾರಿ ಕಚೇರಿಯಿಂದ ತುರ್ತು ಸೂಚನೆ

June 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.