• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅ.17 ದಸರಾ ಮಹೋತ್ಸವ ಉದ್ಘಾಟನೆ; ಅಭಿಮನ್ಯು ಹೆಗಲಿಗೆ ಅಂಬಾರಿ ಭಾರ; ದಸರಾ ಸಭೆಯಲ್ಲಿ ತೀರ್ಮಾನ

padma by padma
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಅ.17 ದಸರಾ ಮಹೋತ್ಸವ ಉದ್ಘಾಟನೆ;  ಅಭಿಮನ್ಯು ಹೆಗಲಿಗೆ ಅಂಬಾರಿ ಭಾರ; ದಸರಾ ಸಭೆಯಲ್ಲಿ ತೀರ್ಮಾನ
0
SHARES
15
VIEWS
Share on FacebookShare on Twitter


ನಾಡಹಬ್ಬ ದಸರಾ ಮಹೋತ್ಸವ ಅ.17ರಂದು ಉದ್ಘಾಟನೆಗೊಳ್ಳಲಿದ್ದು, ಈ ಬಾರಿ ಅಭಿಮನ್ಯು ಹೆಗಲಿಗೆ ಚಿನ್ನದ ಅಂಬಾರಿ ಹೊತ್ತು ಸಾಗಲಿದ್ದಾನೆ.

ದಸರಾ ಮಹೋತ್ಸವ 2020ರ ಅಂಗವಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಉಪಸ್ಥಿತಿಯಲ್ಲಿ ಶನಿವಾರ ದಸರಾ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಯಿತು.

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಮಹೋತ್ಸವ ಸರಳ ಹಾಗೂ ಸಾಂಪ್ರದಾಯಿಕವಾಗಿ ಚಾಮುಂಡಿ ಬೆಟ್ಟ ಹಾಗೂ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಅ. 2ರಂದು ಮೈಸೂರು ಅರಮನೆ ಆವರಣದಲ್ಲಿ ಮಧ್ಯಾಹ್ನ 12:18 ಗಂಟೆಗೆ ದಸರಾ ಗಜಪಡೆ ಸ್ವಾಗತ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಹಿಂದೆ ವೀರನ ಹೊಸಹಳ್ಳಿಯಲ್ಲಿ ನಡೆಯುತ್ತಿದ್ದ ಗಜಪಯಣ ಸಮಾರಂಭ ಇರುವುದಿಲ್ಲ. ನೇರವಾಗಿ ಮೈಸೂರು ಅರಮನೆ ಆವರಣಕ್ಕೆ ಗಜಪಡೆಯ ಆಗಮನವಾಗಲಿದೆ.

ಈ ಬಾರಿ ಕೊರೊನಾ ವಾರಿಯರ್ಸ್ ಗಳಿಂದ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ. ಐವರು ಕೊರೊನಾ ವಾರಿಯರ್ಸ್ ಗಳ ಪೈಕಿ ಒಬ್ಬರು ದಸರಾ ಉದ್ಘಾಟನೆ ಮಾಡಲಿದ್ದು, ಉಳಿದವರಿಗೆ ಸನ್ಮಾನ ಮಾಡಲಾಗುತ್ತದೆ. ಈ ಸನ್ಮಾನಿತರ ಪಟ್ಟಿಯಲ್ಲಿ ಕೋವಿಡ್ ಶವ ಸಂಸ್ಕಾರ ಮಾಡಿದ ವ್ಯಕ್ತಿಯನ್ನು ಸೇರಿಸಿಕೊಳ್ಳುವ ಬಗ್ಗೆ ಪ್ರಸ್ತಾಪ‌ಬಂದಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.
ಅ.17ಕ್ಕೆ ದಸರಾ ಉದ್ಘಾಟನೆ
ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವ ಅ.17 ರಂದು ಬೆಳಗ್ಗೆ 7:45 ರಿಂದ 8:15ರೊಳಗಿನ ಶುಭ ಮುಹೂರ್ತದಲ್ಲಿ ಈ ಬಾರಿಯ ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ. ದಸರಾ ದೀಪಾಲಂಕಾರ ಪ್ರತಿ ಬಾರಿಯಂತೆಯೇ ವಿದ್ಯುತ್ ನಿಗಮದ ವತಿಯಿಂದ ಇರಲಿದೆ. ಜಂಬೂ ಸವಾರಿ ಮೆರವಣಿಗೆ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಲಿದೆ. ಅರಮನೆ ಆವರಣದ ಒಳಗೆ ನಡೆಯುವ ಜಂಬೂ ಸವಾರಿಗೆ ಎರಡು ಸಾವಿರ ಮಂದಿಗೆ ಅವಕಾಶ ಸಾಮರ್ಥ್ಯವಿದೆ. ಆದರೆ ಎಷ್ಟು ಜನರ ಸೇರಿಸಲು ಅನುಮತಿ ಸಿಗುತ್ತದೋ ನೋಡಿ, ಆಹ್ವಾನಿತರ ಸಂಖ್ಯೆಯನ್ನು ನಿರ್ಧರಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಅಭಿಮನ್ಯು ಹೆಗಲಿಗೆ ಅಂಬಾರಿ

ಈ ಬಾರಿಯ ದಸರೆಯಲ್ಲಿ ಅಂಬಾರಿ ಹೊರುವ ಆನೆಯ ಕುರಿತು ಭಾರೀ ಚರ್ಚೆ ಉಂಟಾಗಿತ್ತು. ಆದರೆ ಇದೀಗ ಮೆರವಣಿಗೆಯಲ್ಲಿ ಅಭಿಮನ್ಯು ಆನೆ ಚಿನ್ನದ ಅಂಬಾರಿ ಹೊತ್ತು ಸಾಗಲಿದ್ದಾನೆ ಎಂಬುದು ಖಚಿತವಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಅರ್ಜುನನಿಗೆ 60 ವರ್ಷ ಮೀರಿರುವುದರಿಂದ ಅಂಬಾರಿ ಹೊರುವ ಅವಕಾಶವಿಲ್ಲ. ಹೀಗಾಗಿ ಅಭಿಮನ್ಯು ಹೆಗಲಿಗೆ ಅಂಬಾರಿ ಹೊರೆಸಲಾಗುತ್ತಿದ್ದು, ಅಭಿಮನ್ಯು ಜೊತೆಗೆ ವಿಕ್ರಮ, ಗೋಪಿ, ವಿಜಯ ಮತ್ತು ಕಾವೇರಿ ಆನೆಗಳು ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿವೆ.

ನವರಾತ್ರಿಯ ಎಲ್ಲಾ ದಿನ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರನ್ನು ಕಾರ್ಯಕ್ರಮ ನೀಡಲು ಆಹ್ವಾನಿಸಲಾಗುವುದು. ಎಲ್ಲಾ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲ ತಾಣದಲ್ಲಿ ನೇರ ಪ್ರಸಾರ ಮಾಡುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.

Related News

ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್‌ಗಳಿಗೆ ಬ್ರೇಕ್‌: ಕಠಿಣ ಕಾನೂನು ಜಾರಿ, 1 ವರ್ಷ ಜಾಮೀನು ರಹಿತ ಜೈಲು
ಪ್ರಮುಖ ಸುದ್ದಿ

ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್‌ಗಳಿಗೆ ಬ್ರೇಕ್‌: ಕಠಿಣ ಕಾನೂನು ಜಾರಿ, 1 ವರ್ಷ ಜಾಮೀನು ರಹಿತ ಜೈಲು

July 16, 2026
ಭೂಮಿ ಬಲವಂತವಾಗಿ ಪಡೆಯುವುದಿಲ್ಲ ಎನ್ನುವುದಷ್ಟೇ ಸಾಕಾಗುವುದಿಲ್ಲ: ಬಿಡದಿ ಟೌನ್‌ಶಿಪ್ ಯೋಜನೆ ರದ್ದುಗೊಳಿಸುವಂತೆ ರೈತರ ಒತ್ತಾಯ
ಪ್ರಮುಖ ಸುದ್ದಿ

ಭೂಮಿ ಬಲವಂತವಾಗಿ ಪಡೆಯುವುದಿಲ್ಲ ಎನ್ನುವುದಷ್ಟೇ ಸಾಕಾಗುವುದಿಲ್ಲ: ಬಿಡದಿ ಟೌನ್‌ಶಿಪ್ ಯೋಜನೆ ರದ್ದುಗೊಳಿಸುವಂತೆ ರೈತರ ಒತ್ತಾಯ

July 16, 2026
ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ
ಪ್ರಮುಖ ಸುದ್ದಿ

ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ

July 15, 2026
ಫ್ರಾನ್ಸ್‌ ವಿರುದ್ಧ 2-0 ಜಯ: ಫಿಫಾ ವಿಶ್ವಕಪ್‌ 2026 ಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ
Sports

ಫ್ರಾನ್ಸ್‌ ವಿರುದ್ಧ 2-0 ಜಯ: ಫಿಫಾ ವಿಶ್ವಕಪ್‌ 2026 ಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

July 15, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.