• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಆರಂಭದಿಂದಲೂ ಅಖಂಡ ಪರವಾಗಿದ್ದೇನೆ: ಡಿ.ಕೆ. ಶಿವಕುಮಾರ್

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಆರಂಭದಿಂದಲೂ ಅಖಂಡ ಪರವಾಗಿದ್ದೇನೆ: ಡಿ.ಕೆ. ಶಿವಕುಮಾರ್
0
SHARES
0
VIEWS
Share on FacebookShare on Twitter

ಬೆಂಗಳೂರು, ನ. 17: ನಾನು ಆರಂಭದಿಂದಲೂ ಶಾಸಕ ಅಖಂಡ ಅವರ ಪರವಾಗಿದ್ದೇನೆ. ಬೇರೆಯವರ ವೈಯಕ್ತಿಕ ಅಭಿಪ್ರಾಯ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕೆ.ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಬಂಧನ ಕುರಿತು ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಖಂಡ ಶ್ರೀನಿವಾಸ ಮೂರ್ತಿ ಅವರು ಈವರೆಗೂ ನನ್ನ ಬಳಿ ಬಂದು ಮಾತನಾಡಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದು, ಅದರದೇ ಆದ ಪ್ರಕ್ರಿಯೆ ನಡೆಯುತ್ತಿದೆ. ಕೇವಲ ಒಬ್ಬರ ಅಭಿಪ್ರಾಯದ ಮೇಲೆ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ ಎಂದು ಹೇಳಿದರು.

ನಾನು ನ್ಯಾಯಬದ್ಧವಾಗಿ, ಕಾನೂನಿನ ಚೌಕಟ್ಟಿನಲ್ಲಿ ನಡೆದುಕೊಳ್ಳುವ ಎಲ್ಲರ ಪರವಾಗಿದ್ದೇನೆ. ನಾನು ಅಖಂಡ ಅವರ ಪರವಾಗಿಲ್ಲ ಎಂದು ಯಾರು ಹೇಳಿದರು? ಈ ಪ್ರಕರಣ ನಡೆದ ಕ್ಷಣದಿಂದಲೂ ಅವರ ಜತೆ ಇದ್ದೇವೆ. ನಾನು ನಮ್ಮ ನಾಯಕರು ಅವರ ಮನೆಗೆ ಹೋಗಿದ್ದೇವೆ. ಅವರ ಜತೆ ಚರ್ಚೆ ಮಾಡಿದ್ದೇವೆ. ಪೊಲೀಸರ ವೈಫಲ್ಯ ತೋರಿಸಿದ್ದೇವೆ. ಪೊಲೀಸರು ಬಿಜೆಪಿಯ ಒತ್ತಡಕ್ಕೆ ಮಣಿಯಬಾರದು ಎಂದೂ ಹೇಳಿದ್ದೇವೆ. ಅಖಂಡ ಶ್ರೀನಿವಾಸ್ ಮಾಧ್ಯಮಗಳ ಮುಂದೆ ಮಾತನಾಡುವುದಕ್ಕಿಂತ ನನ್ನ ಬಳಿ ಬಂದು ಮಾತನಾಡಲಿ. ಯಾರದೇ ವೈಯಕ್ತಿಕ ಅಭಿಪ್ರಾಯದ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಸಂಪತ್ ರಾಜ್ ಆಗಲಿ ಅಥವಾ ಬೇರೆ ಯಾರೇ ಆಗಲಿ ಎಲ್ಲರೂ ಕಾನೂನನ್ನು ಗೌರವಿಸಬೇಕು. ಸರ್ಕಾರ ಕಾನೂನು ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನೂ ನಾವು ನೋಡುತ್ತಿದ್ದೇವೆ. ಇದು ಬಿಜೆಪಿಯವರ ಕುತಂತ್ರ. ಕಾಂಗ್ರೆಸ್ ಗೆ ಕೆಟ್ಟ ಹೆಸರು ತರಲು ಈ ಪ್ರಯತ್ನ ಮಾಡುತ್ತಿದೆ. ಸಂಪತ್ ರಾಜ್ ಅವರನ್ನು ಟಾರ್ಗೆಟ್ ಮಾಡುತ್ತಿರುವುದು ನಿಜ. ಇದರಲ್ಲಿ ಮುಚ್ಚಿಡುವುದೇನಿಲ್ಲ. ಅವರ ವಿರುದ್ಧದ ಆರೋಪ ಪಟ್ಟಿ ನೋಡಿದ್ದೇನೆ. ಕಾಂಗ್ರೆಸ್ ಅನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕರಿಗೆ ತೊಂದರೆ ನೀಡಬೇಕು ಅಂತಾ ಈ ರೀತಿ ಮಾಡುತ್ತಿದ್ದಾರೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವ ಕಾರಣ ಹೆಚ್ಚಾಗಿ ಪ್ರತಿಕ್ರಿಯೆ ನೀಡುವುದಿಲ್ಲ. ಸಂಪತ್ ರಾಜ್ ಎಲ್ಲಿಯೂ ಓಡಿ ಹೋಗಿರಲಿಲ್ಲ. ಅವರಿಗೆ ಆರೋಗ್ಯ ಸಮಸ್ಯೆ ಇತ್ತು. ಈಗ ಅವರು ಸಿಕ್ಕಿದ್ದಾರಲ್ಲ ಎಂದರು.

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.