• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಅಕ್ಟೋಬರ್,23-ಬುಧವಾರ

Kiran K by Kiran K
in ಜ್ಯೋತಿಷ್ಯ
ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಅಕ್ಟೋಬರ್,23-ಬುಧವಾರ
0
SHARES
0
VIEWS
Share on FacebookShare on Twitter

ಮೇಷ:- ಕೆಲವು ಸಮಸ್ಯೆಗಳು ಎದುರಾಗಲಿವೆಯಾದರೂ ಎದುರಿಸುವ ಶಕ್ತಿಯನ್ನು ತೋರುವಿರಿ. ಜನರೊಡನೆ ಬೆರೆಯುವಾಗ ತಾಳ್ಮೆಯನ್ನು ರೂಢಿಸಿಕೊಳ್ಳಿ. ಅನವಶ್ಯಕ ಪ್ರಶ್ನೆಗಳಿಗೆ ಕೆರಳಬೇಡಿ. ಅದೃಷ್ಟ ಸಂಖ್ಯೆ – 3

ವೃಷಭ:- ನಿಮ್ಮ ಅನುಭವಗಳ ನೆಲೆಯಲ್ಲಿ ಜಾಗ್ರತೆಯ ಹೆಜ್ಜೆ ಇರಿಸಿ. ಕಿರಿಕಿರಿ ಮಾಡುವವರನ್ನು ನಿಯಂತ್ರಣಕ್ಕೆ ಒಳಪಡಿಸುವುದು ಒಳ್ಳೆಯದು. ದುಂದುವೆಚ್ಚಗಳಿಗೆ ಕಡಿವಾಣ ಹಾಕದೆ ಇದ್ದಲ್ಲಿ ಆರ್ಥಿಕ ಸಮಸ್ಯೆಯ ಸುಳಿಯಲ್ಲಿ ಸಿಲುಕಿಕೊಳ್ಳುವಿರಿ. ಅದೃಷ್ಟ ಸಂಖ್ಯೆ – 7

ಮಿಥುನ:- ಬಂಧುವರ್ಗದವರು ಅಥವಾ ಒಡಹುಟ್ಟಿದ ಸಹೋದರ, ಸಹೋದರಿಯರೇ ಆಸ್ತಿ ಪಾಲಿನ ವಿಚಾರದಲ್ಲಿ ತಕರಾರು ಮಾಡುವ ಸಾಧ್ಯತೆ ಇದೆ. ಗುರು-ಹಿರಿಯರ ಮಧ್ಯಸ್ಥಿಕೆಯಿಂದ ಒಳಿತಾಗುವುದು. ನಿಮಗೆ ನ್ಯಾಯಯುತವಾಗಿ ಬರಬೇಕಾದ ಪಾಲು ದೊರೆಯುವುದು. ಅದೃಷ್ಟ ಸಂಖ್ಯೆ – 4

ಕಟಕ:- ಯಾವುದೇ ಕಾರ್ಯ ಮಾಡುವ ಮೊದಲು ಸ್ಥಾನಬಲ ಮುಖ್ಯ. ಯಾವುದೇ ಸೂಕ್ತ ನಿರ್ಧಾರ ತಳೆಯುವ ಮುನ್ನ ಎರಡು ಬಾರಿ ಚಿಂತಿಸಿ. ಅದೃಷ್ಟ ಸಂಖ್ಯೆ – 8

ಸಿಂಹ:- ಸುಲಭವಾಗಿ ಪರಿಹಾರವಾಗುವ ವಿಷಯಕ್ಕೆ ಜಗ್ಗಾಡದೆ ಅಥವಾ ಕಾದಾಡದೆ ಸುಮ್ಮನೆ ಮಾತುಕತೆ ನಡೆಸಿ. ಇದರಿಂದ ಒಳಿತಾಗುವುದು. ಇತರರಿಗೆ ಸಹಾಯ ಮಾಡಲು ಮನಸ್ಸು ಇಲ್ಲದಿದ್ದರೆ ಸಹಾಯ ಮಾಡುವವರನ್ನು ದಾರಿ ತಪ್ಪಿಸಬೇಡಿ. ಅದೃಷ್ಟ ಸಂಖ್ಯೆ – 2

ಕನ್ಯಾ:- ನಿಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಿ. ಎಲ್ಲವೂ ಸುಗಮವಾಗುವುದು. ಅನ್ಯರ ಮಾತಿಗೆ ಮಾರುಹೋಗದಿರಿ. ದೃಷ್ಟ ಸಂಖ್ಯೆ – 1

ತುಲಾ:- ವಿದೇಶದಿಂದ ಬರುವ ಸ್ನೇಹಿತ ಅಥವಾ ಬಂಧುಗಳ ಆಗಮನದಿಂದ ಅನಿರೀಕ್ಷಿತವಾಗಿ ಬಹುದಿನಗಳ ವ್ಯಾಜ್ಯ ಸಮಾಪ್ತಿಯಾಗುವುದು. ಕೆಲಸ ಕಾರ್ಯಗಳಲ್ಲಿನ ನಿಷ್ಠೆಯು ನಿಮಗೆ ಗೌರವ ತಂದುಕೊಡುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಅದೃಷ್ಟ ಸಂಖ್ಯೆ – 9

ವೃಶ್ಚಿಕ:- ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎಂಬ ಮಾತು ತಿಳಿದೂ ದೂರದ ಬಂಧುಗಳು ಸಹಾಯ ಮಾಡುವರು ಎಂಬ ಭ್ರಮೆಯಲ್ಲಿರಬೇಡಿ. ಸದ್ಯದ ಗ್ರಹಸ್ಥಿತಿಗಳು ಪೂರಕವಾಗಿಲ್ಲದ ಕಾರಣ ಅರಿತು ಸುಮ್ಮನಿರುವುದು ಒಳ್ಳೆಯದು. ಅದೃಷ್ಟ ಸಂಖ್ಯೆ – 5

ಧನುಸ್ಸು:- ಎಷ್ಟೇ ಕೂಗಾಡಿದರೂ ಕೋಪ ಅನರ್ಥಕ್ಕೆ ಕಾರಣವಾಗುವುದೇ ಹೊರತು ಅದರಿಂದ ಯಾವ ಕೆಲಸ ಕಾರ್ಯವೂ ಕೈಗೂಡುವುದಿಲ್ಲ. ಕುಟುಂಬ ಸದಸ್ಯರ ಭಾವನೆಗಳಿಗೂ ಬೆಲೆ ಕೊಡಿ ಮತ್ತು ತಾಳ್ಮೆಯಿಂದ ಇರಿ. ಅದೃಷ್ಟ ಸಂಖ್ಯೆ – 6

ಮಕರ:– ಹಿರಿಯರ ಮಾತುಗಳನ್ನು ತಾಳ್ಮೆಯಿಂದ ಕೇಳಿಸಿಕೊಳ್ಳಿ. ಅವಸರದ ತೀರ್ಮಾನದಿಂದ ಅಪಹಾಸ್ಯಕ್ಕೆ ಗುರಿ ಆಗುವ ಸಂದರ್ಭವಿದೆ. ಕೆಲವರಿಗೆ ವೃತ್ತಿಯಲ್ಲಿ ಬದಲಾವಣೆ ಕಂಡು ಬರುವುದು. ಅಧಿಕ ಖರ್ಚಿನ ದಾರಿ ಎದುರಾಗುವುದು. ಅದೃಷ್ಟ ಸಂಖ್ಯೆ – 8

ಕುಂಭ:- ವಿಷ್ಣು ಸಹಸ್ರನಾಮ ಪಾರಾಯಣದಿಂದ ಇಚ್ಛಿತ ಕಾರ್ಯಗಳು ಬೇಗನೆ ಕೈಗೂಡುವುವು. ನೀವು ನಿಮ್ಮ ವಿದ್ಯಾಭ್ಯಾಸದಲ್ಲಿ ಚಾಕಚಕ್ಯತೆ ತೋರಿ ಅಂತಿಮ ಗುರಿ ತಲುಪಲು ಈ ಸ್ತೋತ್ರ ಸಹಕಾರಿಯಾಗುವುದು. ಅದೃಷ್ಟ ಸಂಖ್ಯೆ – 1

ಮೀನ:- ಕೆಲವು ಪ್ರಮುಖ ಜವಾಬ್ದಾರಿಗಳಿಂದ ನುಣುಚಿಕೊಳ್ಳಲು ಆಗುವುದಿಲ್ಲ. ಅಂತೆಯೇ ಬಹು ಮುಖ್ಯವಾದ ಕಡತವೊಂದನ್ನು ಹುಡುಕಿಕೊಡಲೇಬೇಕೆಂದು ನಿಮ್ಮ ಮೇಲಧಿಕಾರಿಗಳು ಆದೇಶ ಹೊರಡಿಸುವರು. ದೇವರನ್ನು ಸ್ಮರಿಸಿ ಕಾರ್ಯ ಪ್ರವೃತ್ತರಾಗಿ. ಅದೃಷ್ಟ ಸಂಖ್ಯೆ – 7

Related News

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಅಕ್ಟೋಬರ್,23-ಬುಧವಾರ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 16, 2019- ಸೋಮವಾರ

February 5, 2020
ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..?ಅಕ್ಟೋಬರ್ 02,2019-ಬುಧವಾರ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 17,2019- ಮಂಗಳವಾರ

February 5, 2020
ಪಕ್ಕಾ ಆಗಿದೆ ಪಿ.ವಿ.ಸಿಂಧು ಬಯೋಪಿಕ್: ಕೋಚ್ ಪಾತ್ರದಲ್ಲಿ ಮಿಂಚಲಿರುವ ಸ್ಟಾರ್ ನಟ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 19,2019-ಗುರುವಾರ

February 5, 2020
ನೆರೆ ಸಂತ್ರಸ್ತರ ಬಳಿ ಇಂತಹ ಮಾತುಗಳನ್ನಾಡಿ ಪ್ರಚೋದಿಸ್ತಿದ್ದಾರಾ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 5,2019 – ಗುರುವಾರ

February 5, 2020

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.