
ನೇಪಾಳದ ಪ್ರಧಾನ ಮಂತ್ರಿ ಕೆಪಿ ಶರ್ಮಾ ಒಲಿಯವರ ಸರ್ಕಾರದ ಸ್ಥಿತಿ ಸದ್ಯಕ್ಕೆ ಡೋಲಾಯಮಾನವಾಗಿದೆ. ಒಲಿ ನಾಯಕತ್ವದ ವಿರುದ್ಧ ಪುಷ್ಪ ಕಮಲ್ ದೊಹಲ್ ಅಲಿಯಾಸ್ ಪ್ರಚಂಡ ಬಂಡಾಯ ಸಾರಿದ್ದಾರೆ. ಪ್ರಚಂಡ ಬಂಡಾಯ ಒಲಿ ನಾಯಕತ್ವಕ್ಕೆ ಕುತ್ತು ತಂದಿದೆ.
ಭಾರತದ ವಿರುದ್ಧ ಎದೆಯುಬ್ಬಿಸಿ ನಿಂತ್ತಿದ್ದ ಪ್ರಧಾನಿ ಕೆಪಿ ಶರ್ಮಾ ಒಲಿ ಇಂದು ತಮ್ಮ ಅಧಿಕಾರ ಉಳಿಸಿಕೊಳ್ಳಲು ಪರದಾಡುವಂತಾಗಿದೆ. ಒಲಿಯವರ ಏಕಪಕ್ಷೀಯ ನಿರ್ಧಾರಗಳಿಂದಾಗಿ ದೇಶ ಸಂಕಷ್ಟಕ್ಕೆ ಸಿಲುಕಿಕೊಂಡಿದೆ ಎಂದು ದೊಹಲ್ ಆರೋಪಿಸಿದ್ದಾರೆ. ಹೀಗಾಗಿ ಯಾವುದೇ ವೇಳೆಯಲ್ಲದರೂ ಒಲಿ ನೇತೃತ್ವದ ಸರ್ಕಾರ ಪತನವಾಗುವ ಸಂಭವವಾಗುವ ಸಾಧ್ಯತೆ ಹೆಚ್ಚಾಗಿದೆ.
ಒಲಿ ಇದೀಗ ನೇಪಾಳದ ರಾಜಕೀಯ ಬೆಳವವಣಿಗೆಗಳಿಗೆ ಭಾರತವೇ ಕಾರಣ ಎಂದು ಭಾರತದತ್ತ ಬೊಟ್ಟು ಮಾಡಿ ತೋರಿಸುತ್ತಿದೆ. ಜತೆಗೆ ತಮ್ಮ ಸರ್ಕಾರದ ವಿರುದ್ಧ ನಡೆಯುತ್ತಿರುವ ಬಂಡಾಯಕ್ಕೆ ಭಾರತವೇ ಕಾರಣ ಎಂದು ಆರೋಪಿಸುತ್ತಿದ್ದಾರೆ. ಗಡಿ ನಕ್ಷೆ ನವೀಕರಣ ಮಾಡಿರುವುದು ಭಾರತಕ್ಕೆ ನುಂಗಲಾರದ ತುತ್ತಾಗಿದೆ. ಈ ಕಾರಣಕ್ಕೆ ತನ್ನ ಪದಚ್ಯುತಿ ಮಾಡಿ ಸರ್ಕಾರ ಉರುಳಿಸುವ ಷಡ್ಯಂತರವನ್ನು ಭಾರತ ಮಾಡುತ್ತಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.