• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೊಡಗಿನ ಯುವಕ ಪಾಕಿಸ್ಥಾನದ ಜೈಲಿನಲ್ಲಿ ಬಂಧಿ ?

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಕೊಡಗಿನ ಯುವಕ ಪಾಕಿಸ್ಥಾನದ ಜೈಲಿನಲ್ಲಿ ಬಂಧಿ  ?
0
SHARES
0
VIEWS
Share on FacebookShare on Twitter

ಮಡಿಕೇರಿ, ಅ.13: ಕೊಡಗಿನ ಯುವಕನೊಬ್ಬ ಪಾಕಿಸ್ಥಾನದ ಜೈಲಿನಲ್ಲಿ ಬಂದಿಯಾಗಿದ್ದಾನೆ ಎಂದು ಹೇಳಲಾಗಿದೆ. ಅದರೆ ಅಲ್ಲಿನ ಜೈಲಿನಲ್ಲಿರುವ ಯುವಕ ಈತನೇ ಎಂಬುದು ಇನ್ನೂ ದೃಡಪಟ್ಟಿಲ್ಲ. ಗೋಣಿಕೊಪ್ಪ ಸಮೀಪದ ನ ಕೈಕೇರಿ ಗ್ರಾಮದ ನಿವಾಸಿಗಳಾದ ಪಿ.ಎಂ. ಕುಶಾಲಪ್ಪ-ಮೀನಾಕ್ಷಿ ದಂಪತಿ ಪುತ್ರ ಯಶ್ವಂತ್ ಎಂಬಾತನು 2006ರಲ್ಲಿ ಮೈಸೂರಿನಿಂದ ಕಾಣೆಯಾಗಿದ್ದ. ಆಗ ಆತನಿಗೆ 18 ವರ್ಷ ವಯಸ್ಸು. ಇತ್ತೀಚೆಗೆ ಪಾಕಿಸ್ತಾನದಿಂದ ಬಂದಿರುವ ಭಾವಚಿತ್ರ ಮಗನದ್ದೇ ಎಂದು ದಂಪತಿ ಹೇಳುತ್ತಿದ್ದಾರೆ. ಡಿಎನ್​ಎ ಪರೀಕ್ಷೆ ಮೂಲಕ ಅದನ್ನು ದೃಢಪಡಿಸುವ ಪ್ರಯತ್ನ ನಡೆಯುತ್ತಿದೆ. ಆದರೆ, ಉಭಯ ರಾಷ್ಟ್ರಗಳ ನಡುವಿನ ಪ್ರತಿಕೂಲ ಪರಿಸ್ಥಿತಿಯಿಂದ ಈ ಪ್ರಯತ್ನಕ್ಕೆ ಹಿನ್ನೆಡೆಯಾಗುತ್ತಿದೆ.

ಗೋಣಿಕೊಪ್ಪ ಕಾವೇರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಯಶ್ವಂತನನ್ನು ಹಾಜರಾತಿ ಕಡಿಮೆ ಎಂಬ ಕಾರಣಕ್ಕೆ ಕಾಲೇಜಿನಿಂದ ಬಿಡಿಸಿ, ಮೈಸೂರಿನ ಜನಶಿಕ್ಷಣ ಸಂಸ್ಥೆಗೆ ಸೇರಿಸಿದ್ದರು.
ನಂತರ ಮೈಸೂರಿನಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದ. ಯಶ್ವಂತ ಮನೆಯ ಸಂಪರ್ಕ ಕಡಿಮೆ ಮಾಡಿಕೊಂಡಿದ್ದ. ದೂರವಾಣಿ ಕರೆ ಸ್ವೀಕರಿಸುತ್ತಿರಲಿಲ್ಲ. ಆತ ಮನೆಗೆ ಬರುವ ನಿರೀಕ್ಷೆಯೂ ಹುಸಿಯಾದಾಗ, 2007ರಲ್ಲಿ ಆತ ಕಾಣೆಯಾಗಿರುವ ಬಗ್ಗೆ ಪೋಷಕರು ಮೈಸೂರಿನಲ್ಲಿ ದೂರು ದಾಖಲಿಸಿದ್ದರು.

ಈ ನಡುವೆ, ಪಾಕಿಸ್ತಾನದಲ್ಲಿ ಭಾರತೀಯರು ಬಂಧಿಗಳಾಗಿರುವ ಕುರಿತು ಮಾಧ್ಯಮಗಳಲ್ಲಿ ಬಿತ್ತರವಾದ ವರದಿಯಲ್ಲಿ ಯಶ್ವಂತ್​ನನ್ನು ಹೋಲುವ ಚಿತ್ರ ಇದ್ದಿದ್ದರಿಂದ ಆತ ತಮ್ಮ ಮಗನೇ ಎಂಬ ನಿರ್ಧಾರಕ್ಕೆ ಪಾಲಕರು ಬಂದಿದ್ದಾರೆ. ಈ ಬಗ್ಗೆ ಹೈಕೋರ್ಟ್​ನಲ್ಲಿ ದಾವೆ ಹೂಡಿದ್ದು, ಅವರ ಪ್ರಯತ್ನಕ್ಕೆ ಪೂರಕ ತೀರ್ಪು ಬಂದಿದೆ.


ಲಾಹೋರ್​ನ ಹೂದೋಟದಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯಶ್ವಂತ್ ತನ್ನ ಹೆಸರನ್ನು ರಮೇಶ್ ಎಂದು ಹೇಳಿಕೊಂಡಿದ್ದು, ಪಾಲಕರ ಹೆಸರು ನೀಡಿಲ್ಲ. ಹೆಸರಿನ ಗೊಂದಲ ಸೃಷ್ಟಿಯಾಗಿದ್ದು, ಯಶ್ವಂತ್‌ ತಮ್ಮ ಮಗ ಎಂದು ಪಾಲಕರು ಹೇಳುತ್ತಿದ್ದಾರೆ. ರಮೇಶ್ ಲಾಹೋರ್​ನ ಜೈಲಿನಲ್ಲಿದ್ದು, ಅಲ್ಲಿಗೆ ಹೇಗೆ ತಲುಪಿದ ಎಂಬ ಬಗ್ಗೆ ಮಾಹಿತಿ ಇಲ್ಲ. ಈ ಕುರಿತು ಹಿಂದೆ ವಿದೇಶಾಂಗ ಸಚಿವರಾಗಿದ್ದ ಸುಷ್ಮಾ ಸ್ವರಾಜ್ ಹೆಚ್ಚು ಮುತುವರ್ಜಿ ವಹಿಸಿದ್ದರು. ವೈದ್ಯಕೀಯ ಪರೀಕ್ಷೆ ಮೂಲಕ ವಾರಸುದಾರನ ಪತ್ತೆ, ಭಾರತೀಯ ಎಂಬುದನ್ನು ದೃಢಪಡಿಸಿಕೊಳ್ಳಲು ಪತ್ರ ವ್ಯವಹಾರ ನಡೆಯುತ್ತಿದೆ. ಶಾಸಕ ಕೆ.ಜಿ. ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿದೆ. ಪ್ರಧಾನಿ ಮೋದಿ ಮೂಲಕ ಮತ್ತಷ್ಟು ಒತ್ತಡ ಹೇರಲು ಪಾಲಕರು ಮುಂದಾಗಿದ್ದಾರೆ.

ಭಾರತೀಯ ವಿದೇಶಾಂಗ ಸಚಿವಾಲಯದ ಉಪ ಕಾರ್ಯದರ್ಶಿ ಶ್ವೇತಾ ಸಿಂಗ್ ಪಾಕಿಸ್ತಾನದೊಂದಿಗೆ ಪತ್ರ ವ್ಯವಹಾರ ನಡೆಸುತ್ತಿದ್ದಾರೆ ಎಂದು ಬೆಂಗಳೂರಿನ ವಕೀಲ ಸಿ.ಎನ್. ಶ್ರೀನಿವಾಸ್​ರಾವ್ ಅವರಿಗೆ ಅಧಿಕೃತ ಮಾಹಿತಿ ಬಂದಿದೆ. ಭಾರತೀಯ ಎಂಬುದನ್ನು ನಿರ್ಧರಿಸಬೇಕಿದ್ದು, ಈ ಬಗ್ಗೆ ಪಾಕಿಸ್ತಾನ ಸರ್ಕಾರದ ಅನುಮತಿಗಾಗಿ ಕಾಯುತ್ತಿರುವುದಾಗಿ ತಿಳಿಸಿದೆ. ಅದರಂತೆ, ಭಾರತೀಯ ವೈದ್ಯಕೀಯ ತಂಡಕ್ಕೆ ಅಲ್ಲಿಗೆ ತೆರಳಲು ಅನುಮತಿ ಕೇಳಲಾಗುತ್ತಿದೆ.

ಯಶ್ವಂತ್​ನನ್ನು ಪಾಕಿಸ್ತಾನ ದಿಂದ ಬಿಡಿಸಿಕೊಂಡು ಬಂದು ವರದಿ ನೀಡುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಇಲ್ಲಿಂದ ಒಂದು ತಂಡ ಕೂಡ ಅಲ್ಲಿಗೆ ತೆರಳಿ, ಅವನ ಪರಿಸ್ಥಿತಿ ತಿಳಿದುಕೊಂಡು ಬಂದಿದೆ. ಆತನು ಮಾನಸಿಕವಾಗಿ ಅಸ್ವಸ್ಥಗೊಂಡಿರುವ ಬಗ್ಗೆ ಮಾಹಿತಿ ತಿಳಿದು ಬಂದಿದ್ದು, ಆತನ ಶಿಕ್ಷೆಯ ಅವಧಿ ಕೂಡ ಮುಗಿದಿದೆ ಎಂದು ಬೆಂಗಳೂರಿನ ವಕೀಲ ಶ್ರೀನಿವಾಸ ರಾವ್‌ ಹೇಳುತ್ತಾರೆ.

ಪಾಕಿಸ್ತಾನ ಜೈಲಿನಿಂದ ಬಂದಿರುವ ಭಾವಚಿತ್ರ ನನ್ನ ಮಗನನ್ನು ಹೋಲುವಂತೆ ಇದೆ. ಕಾಣೆಯಾಗುವಾಗ 18 ವರ್ಷ ವಯಸ್ಸಾಗಿತ್ತು. ಈಗ 32 ವರ್ಷ ವಯಸ್ಸಾಗಿದೆ. ಅವನನ್ನು ಬಿಡಿಸಿಕೊಂಡು ಬರಲು ಎಲ್ಲ ರೀತಿಯ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಯಶ್ವಂತನ ತಂದೆ ಪಿ.ಎಂ.ಕುಶಾಲಪ್ಪ, ತಿಳಿಸಿದರು.

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !
Vijaya Time

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

June 10, 2023
bill
ರಾಜ್ಯ

ಇಂಧನ ಹೊಂದಾಣಿಕೆ ಶುಲ್ಕ ನೆಪ, ಡಬಲ್ ಆಯ್ತು ಕರೆಂಟ್ ಬಿಲ್ ; ಹಲವೆಡೆ ಪ್ರತಿಭಟನೆ

June 10, 2023
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.