• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಕೋವಿಡ್ ೧೯ ಹೋಮ್ ಕ್ವಾರಂಟೈನ್ ಬೀಟ್ ಟ್ರಾö್ಯಕರ್ ಮೂಲಕ ಕ್ವಾರಂಟೈನ್‌ಗಳ ಟ್ರಾö್ಯಕಿಂಗ್

Kiran K by Kiran K
in ರಾಜ್ಯ, ಲೈಫ್ ಸ್ಟೈಲ್
0
SHARES
12
VIEWS
Share on FacebookShare on Twitter

ಸೋಂಕಿತರ ಸಂಖ್ಯೆ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಕೇಂದ್ರ, ರಾಜ್ಯ ಸರಕಾರಗಳು ಆತಂಕಕ್ಕೆ ಒಳಗಾಗಿವೆ. ಈ ನಿಟ್ಟಿನಲ್ಲಿ ಸಾವಿರಾರು ಮಂದಿ ಹೋಮ್ ಕ್ವಾರಂಟೈನ್ ಅಂದರೆ ಮನೆಯಲ್ಲೇ ನಿಗಾ ವ್ಯವಸ್ಥೆ ಮೂಲಕ ಇದ್ದಾರೆ. ಆದರೆ ಇತ್ತೀಚಿನ ಕೆಲವು ದಿನಗಳಿಂದ ಹೀಗೆ ಹೋಮ್ ಕ್ವಾರಂಟೈನ್ ಆಗಿರುವ ಕೆಲವು ಮಂದಿ ಸ್ಟ್ಯಾಂಪ್ ಹಾಕಿದ್ದರೂ ಬೇಕಾಬಿಟ್ಟಿ ಓಡಾಟ ನಡೆಸುವ ಮೂಲಕ ಜನರಲ್ಲಿ ಆತಂಕ ಸೃಷ್ಟಿಸುತ್ತಿದ್ದಾರೆ. ಇವರ ಮೇಲೆ ನಿಗಾ ವಹಿಸಲು ಸುಧಾರಿತ ಆಪ್ ನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮಿನಿವಿಧಾನ ಸೌಧದಲ್ಲಿರುವ ವಾರ್ ರೂಮ್ ನಲ್ಲಿ ಬಿಡುಗಡೆ ಗೊಳಿಸಿದರು.

ಕ್ವಾರಂಟೈನ್ ಗಳನ್ನು ಮನೆಯಲ್ಲೇ ನಿಗಾ ಇರಿಸಲು ಕುಟುಂಬ, ಪೊಲೀಸರು, ಆಶಾ ಕಾರ್ಯಕರ್ತರು, ವೈದ್ಯರು ಹರಸಾಹಸ ಪಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕು ಆಡಳಿತ, ಶ್ರಮಿಕ ಬೆಳ್ತಂಗಡಿ ಶಾಸಕರ ಕಚೇರಿ ಹಾಗೂ ಐ-ಸರ್ಚ್ ಕಂಪೆನಿಯ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಜಿಪಿಎಸ್ ಆಧಾರಿತ ಕೋವಿಡ್ ೧೯ ಹೋಮ್ ಕ್ವಾರಂಟೈನ್ ಬೀಟ್ ಟ್ರಾö್ಯಕರ್ ಬಳಸಿ ನಿಗಾ ವಹಿಸುವ ಕಾರ್ಯಕ್ಕೆ ಮುಂದಾಗಿದೆ. ಇದು ತಾಲೂಕಿನಲ್ಲಿ ಮಾತ್ರವಲ್ಲದೆ ದೇಶದಲ್ಲೇ ಮೊದಲ ಪ್ರಯತ್ನ ಇದಾಗಿದೆ.

ಈಗಾಗಲೇ ಇದರ ಪೂರ್ವ ಸಿದ್ಧತೆ ಮುಗಿದಿದ್ದು ತಾಲೂಕಿನಲ್ಲಿ ಒಂದು ಕೋವಿಡ್- ೧೯ ಪ್ರಕರಣ ಬೆಳಕಿಗೆ ಬಂದ ಬಳಿಕ ಹೋಮ್ ಕ್ವಾರಂಟೈನ್ ಆಗಿರುವವರ ಮೇಲೆ ನಿಗಾ ಇರಿಸಲು ಈ ವ್ಯವಸ್ಥೆ ನೆರವಾಗಲಿದೆ. ಜಿಪಿಎಸ್ ಆಧಾರಿತ ಆಪ್ ಮೂಲಕ ವಾರ್ ರೂಮಲ್ಲಿ ಕೂತು ಹೋಮ್ ಕ್ವಾರಂಟೈನ್ ಆಗಿರುವವರು ಎಲ್ಲಿದ್ದಾರೆ ಹೇಗಿದ್ದಾರೆ ಮತ್ತು ಅವರ ಭಾವಚಿತ್ರ ಸಹಿತ ಮಾಹಿತಿಯನ್ನು ಇದರಿಂದ ಪಡೆಯಬಹುದಾಗಿದೆ. ಸದ್ಯ ಇದನ್ನು ಬೆಳ್ತಂಗಡಿ ತಾಲೂಕಿನಲ್ಲಿ ಜಾರಿಗೆ ತರಲಾಗಿದ್ದು ಮುಂದಿನ ದಿನಗಳಲ್ಲಿ ರಾಜ್ಯದಲ್ಲೂ ಜಾರಿಗೆ ತರಲು ಚಿಂತಿಸಲಾಗಿದೆ.

ಕೋವಿಡ್-೧೯ ಕ್ವಾರಂಟೈನ್ ಟ್ರ‍್ಯಾಕರ್ ಆಪ್ ಜಿಪಿಎಸ್ ಆಧಾರಿತ ಮೊಬೈಲ್ ಆಪ್ ಆಗಿದ್ದು ತಾಲೂಕು ಆರೋಗ್ಯಧಿಕಾರಿ, ತಹಶೀಲ್ದಾರ್, ವೃತ್ತ ನಿರೀಕ್ಷಕರು ಇದರ ಮೇಲುಸ್ತುವಾರಿ ವಹಿಸಲಿದ್ದಾರೆ. ಬೀಟ್ ಪೊಲೀಸ್ ಅವರ ಸ್ಮಾರ್ಟ್ ಫೋನ್ ಗಳಿಗೆ ಆಪ್ ಅಳವಡಿಕೆ ಮಾಡಲಾಗುತ್ತದೆ. ಸ್ಥಳಕ್ಕೆ ಭೇಟಿ ನೀಡುವ ಬೀಟ್ ಪೊಲೀಸರು ಮನೆ ಮತ್ತು ಶಂಕಿತನ ಭಾವಚಿತ್ರ ಪಡೆದು ಅಪ್ ಡೇಟ್ ಮಾಡಬೇಕಿದೆ. ಒಂದು ವೇಳೆ ಸ್ಥಳದಲ್ಲಿ ನೆಟ್ವರ್ಕ್ ಸಮಸ್ಯೆ ಇದ್ದಲ್ಲಿ ನೆಟ್ವರ್ಕ್ ಬಂದ ಬಳಿಕ ಅವರ ವಿವರಗಳು ಅಪ್ಡೇಟ್ ಆಗಲಿದೆ. ಇದರಿಂದ ಹೋಮ್ ಕ್ವಾರಂಟೈನ್ ನ ಸಂಪೂರ್ಣ ಚಿತ್ರಣ ಲಭ್ಯವಾಗಲಿದ್ದು ಪ್ರತಿ ದಿನ ಪೊಲೀಸ್ ಭೇಟಿ ನೀಡಿರುವ ಕುರಿತು ಮಾಹಿತಿ ಲಭ್ಯವಾಗಲಿದೆ. ಕ್ವಾರೆಂಟೆನ್, ಪಾಸಿಟಿವ್, ನೆಗೆಟಿವ್, ೧೪ ದಿನಗಳ ಬಳಿಕದ ವರದಿ ಮನೆಯಲ್ಲಿ ಇಲ್ಲದಿದ್ದರೆ, ಅವರೊಂದಿಗೆ ಜಾಸ್ತಿ ಜನ ಸಂಪರ್ಕದಲ್ಲಿದ್ದರೆ ಹೈ ಅಲರ್ಟ್ ಎಂದು ವರದಿ ನೀಡಿದರೆ ಮೇಲುಸ್ತುವಾರಿಗಳ ದೂರವಾಣಿ ಸಂಖ್ಯೆಗೆ ತಕ್ಷಣ ಸಂದೇಶ ರವಾನೆಯಾಗಲಿದೆ. ತಕ್ಷಣ ಜಾಗೃತರಾಗಬಹುದಾಗಿದೆ.

ಸಾರ್ವಜನಿಕರಿಗೆ ಅವರ ಅಸುಪಾಸಿನಲ್ಲಿ ಇದ್ದವರ ಮಾಹಿತಿಯೂ ಇದೇ ಆಪ್ ನಿಂದ ಪಡೆಯಬಹುದು. ಒಟ್ಟು ೮೧ ಗ್ರಾಮದ ಡೇಟಾ ಸಿಗಲಿದ್ದು, ಇದರಿಂದ ಸ್ಥಳೀಯರು ಸೋಂಕಿತನ ಮೇಲೆ ನಿಗಾದಲ್ಲಿರಬಹುದಾಗಿದೆ. ಕಿಯೋನಿಕ್ಸ್ ನ ಆಪ್ ಅಭಿವೃದ್ಧಿ ಸಂಯೋಜಕರಾದ ಅರವಿಂದ್ ಭಟ್ ಮತ್ತು ಬಾಲಕೃಷ್ಣ ಶೆಟ್ಟಿ ಹೊಸ ಆಪ್ ಅಭಿವೃದ್ಧಿ ಪಡಿಸಿದ್ದಾರೆ. ಕೋವಿಡ್ ೧೯ ಗೃಹ ಪರಿವೀಕ್ಷಣಾ ( ಕ್ವಾರಂಟೈನ್) ಆಗಿರುವಂತವರ ವರದಿ ಪಡೆಯಬಹುದಾದ ಆಪ್ ಲೋಕಾರ್ಪಣೆಗೊಂಡಿದೆ. ತಾಲೂಕಿನ ೨೨೦ ಮಂದಿಯ ಮೇಲೆ ನಿಗಾ ಇಡಲು ಸಹಕಾರಿಯಾಗಲಿದೆ. ಇದು ದೇಶದಲ್ಲೆ ಮೊದಲಬಾರಿಗೆ ಪರಿಚಯಿಸಿದ್ದು. ದೇಶದೆಲ್ಲೆಡೆ ಈ ಆಪ್ ಬಳಸುವ ಮೂಲಕ ಕೊರೊನಾ ಶಂಕಿತರ ಮೇಲೆ ನಿಗಾ ಇಟ್ಟು ಕೊರೊನಾ ಮುಕ್ತ ದೇಶವಾಗಿಸಲು ಸಹಕಾರಿಯಾಗಲಿದೆ.ಎಂದು ಆಪ್ ಬಿಡುಗಡೆಗೊಳಿಸಿ ಶಾಸಕ ಹರೀಶ್ ಪೂಂಜ ಹೇಳಿದರು.ಈ ಸಂದರ್ಭದಲ್ಲಿ ತಹಶೀಲ್ದಾರ್ ಗಣಪತಿ ಶಾಸ್ತ್ರೀ,ಆರೋಗ್ಯಾಧಿಕಾರಿ ಕಲಾಮದು,ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಉಪಸ್ಥಿತರಿದ್ದರು.

Related News

ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ
ಪ್ರಮುಖ ಸುದ್ದಿ

ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ

August 19, 2026
ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ
ಪ್ರಮುಖ ಸುದ್ದಿ

ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ

August 19, 2026
ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡಿಗೆ ಡಿಕೆಶಿ ಖಡಕ್‌ ಎಚ್ಚರಿಕೆ
ಪ್ರಮುಖ ಸುದ್ದಿ

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

August 18, 2026
ಬಿಸಿಯೂಟ ಯೋಜನೆ: ಶಾಲಾ ಮಕ್ಕಳ ಪೌಷ್ಟಿಕ ಆಹಾರಕ್ಕೆ ಸರ್ಕಾರ ಒತ್ತು; ಮೊಟ್ಟೆ ಸಬ್ಸಿಡಿ ಹೆಚ್ಚಳಕ್ಕೆ ಚಿಂತನೆ
ಪ್ರಮುಖ ಸುದ್ದಿ

ಬಿಸಿಯೂಟ ಯೋಜನೆ: ಶಾಲಾ ಮಕ್ಕಳ ಪೌಷ್ಟಿಕ ಆಹಾರಕ್ಕೆ ಸರ್ಕಾರ ಒತ್ತು; ಮೊಟ್ಟೆ ಸಬ್ಸಿಡಿ ಹೆಚ್ಚಳಕ್ಕೆ ಚಿಂತನೆ

August 18, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.