• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಖಾತೆ ಬದಲಾವಣೆ: ಶ್ರೀರಾಮುಲು- ಸುಧಾಕರ್ ವಿವಾದಕ್ಕೆ ಪೂರ್ಣವಿರಾಮ

padma by padma
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಶ್ರೀರಾಮುಲು ಖಾತೆ ಡಾ. ಸುಧಾಕರ್‌ ಪಾಲಿಗೆ
0
SHARES
0
VIEWS
Share on FacebookShare on Twitter

ಬೆಂಗಳೂರು ಅ.13: ಏಕಾ ಏಕಿ ಬದಲಾದ ಖಾತೆಯಿಂದ ಅಸಮಾಧಾನಗೊಂಡಿದ್ದ ಸಚಿವ ಶ್ರೀರಾಮುಲು ಮನಸ್ತಾಪ ಶಮನಗೊಂಡಿದ್ದು, ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ ಮಾಡಿದ ಸಂಧಾನವು ಯಶಸ್ವಿಯಾಗಿದೆ. ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಹಿಂಪಡೆದ ರಾಜ್ಯ ಸರ್ಕಾರವು ಸಮಾಜ ಕಲ್ಯಾಣ ಖಾತೆಯನ್ನು ನೀಡಿದ್ದರಿಂದ ಬೆಸರಗೊಂಡಿದ್ದ ಶ್ರೀರಾಮುಲು ಅಜ್ಞಾತ ಸ್ಥಳಕ್ಕೆ ತೆರಳಿದ್ದರು.

ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಂಧಾನಕ್ಕೆಂದು ಸುಧಾಕರ್ ಹಾಗೂ ಶ್ರೀರಾಮುಲು ಅವರನ್ನು ತಮ್ಮ ಅಧಿಕೃತ ನಿವಾಸವಾದ ಕಾವೇರಿಗೆ ಕರೆಸಿಕೊಂಡಿದ್ದರು. ಈ ಸಲುವಾಗಿ ಉಭಯ ಸಚಿವರಿಬ್ಬರೂ ಬೆಳಿಗ್ಗೆ ಸಿಎಂ ಅಧಿಕ್ಋತ ನಿವಾಸಕ್ಕೆ ಆಗಮಿಸಿದ್ದು ಸುಮಾರು 20 ನಿಮಿಷಗಳ ಕಾಲ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದರು.

ನೀವು ಇಲಾಖೆ ಸಚಿವರಾಗಿ ನಿಮ್ಮ ಖಾತೆಯನ್ನು ಯಶಸ್ವಯಾಗಿಯೇ ನಿಭಾಯಿಸಿದ್ದೀರಿ. ಖಾತೆ ಹಿಂದೆ ಪಡೆದಿರುವುದನ್ನು ಹಿನ್ನಡೆಯೆಂದು ಭಾವಿಸಬೇಡಿ. ಏಕೆಂದರೆ ಹೈಕಮಾಂಡ್ ನಿರ್ದೇಶನದಂತೆ ನಾನು ಖಾತೆ ಮರು ಹಂಚಿಕೆ ಮಾಡಿದ್ದೇನೆಯೇ ಹೊರತು, ಬೇರೆ ಯಾವ ಅಸಮಾಧಾನದಿಂದಲೂ ಅಲ್ಲ. ಈ ಕೊವಿಡ್‌ ಪೆಂಡಾಮಿಕ್‌ ಪರಿಸ್ಥಿತಿಯಲ್ಲಿ ನಿಮಗೆ ವಹಿಸಿದ ಖಾತೆಯನ್ನು ಸಮರ್ಪಕವಾಗಿ ನಿಭಾಯಿಸಿದ್ದೀರಿ. ವರಿಷ್ಟರ ನಿರ್ಧೇಶನದಂತೆ ಕೆಲವು ಖಾತೆಗಳನ್ನು ಬದಲಿಸಲಾಗಿದೆ. ಹಾಗೆಯೇ ರಾಜ್ಯ ಸರ್ಕಾರದ ನಿರ್ವಹಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯೂ ಅತ್ಯಂತ ಪ್ರಮುಖ ಇಲಾಖೆಯಾಗಿದೆ. ಇದನ್ನು ನೀವು ನಿಭಾಯಿಸುವಿರೆಂಬ ನಂಬಿಕೆಯಿಂದ ಈ ಖಾತೆಯ ಜವಬ್ದಾರಿಯನ್ನು ನಿಮಗೆ ನೀಡಲಾಗಿದೆ.  ಇದರಲ್ಲಿ ಹಿನ್ನಡೆ ಮುನ್ನಡೆ ಎಂಬ ಬೇಧ  ಬರುವುದಿಲ್ಲ ಎಂದು ಶ್ರೀರಾಮುಲು ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಖಾತೆ ಬದಲಿಸುವುದು ಮುಖ್ಯಮಂತ್ರಿಗೆ ಬಿಟ್ಟಿದ್ದು, ಆದರೆ ನನ್ನನ್ನು ಸೌಜನ್ಯಕ್ಕಾದರೂ ಒಂದು ಮಾತು ಹೇಳಿ, ನನ್ನ ಗಮನಕ್ಕೆ ತರದೆ ಬದಲಾವಣೆ ಮಾಡಿದ್ದು ಅತೀವ ನೋವುಂಟಾಗಿದೆ. ಹೀಗೆ ದಿಢೀರನೆ ಖಾತೆ ಬದಲಾವಣೆ ಮಾಡಿದ್ದರಿಂದ, ನಾನು ಭ್ರಷ್ಟಾಚಾರ ಮಾಡಿದ್ದೇನೆಂದು ವಿರೋಧ ಪಕ್ಷದವರು ಆರೋಪಿಸುತ್ತಾರೆ. ಇಂತಹ ತೀರ್ಮಾನ ಕೈಗೊಳ್ಳುವ  ಮೊದಲು ನನ್ನ ಅಭಿಪ್ರಾಯ ಕೇಳಬೇಕಿತ್ತು, ನನ್ನೊಬ್ಬನ ಖಾತೆಯನ್ನಷ್ಟೇ ಬದಲಾಯಿಸಿದರೆ ನಾನು ಜನರಿಗೆ ಏನೆಂದು ಉತ್ತರಿಸಲಿ? ಎಂದು ಬಿಎಸ್‌ವೈ ಬಳಿ ತಮ್ಮ ಅಸಮಧಾನವನ್ನು  ವ್ಯಕ್ತಪಡಿಸಿದ್ದಾರೆ.

ನಾಲ್ಕು ವಿಧಾನ ಸಭಾ ಕ್ಷೇತ್ರದ ಚುನಾವಣೆ ನಡೆಯಲಿದ್ದು ಅದು ಮುಗಿದ ಬಳಿಕ ಸಚಿವ ಸಂಪುಟ ಪುನಾರಾರಚನೆ ಆಗುವುದಿದೆ. ಆ ಸಂದರ್ಭದಲ್ಲಿ ನಿಮ್ಮ ನಾಯಕತ್ವಕ್ಕೆ ಅನುಗುಣವಾಗಿ ಸ್ಥಾನ-ಮಾನ ನೀಡಲಾಗುವುದು ಎಂದರು. ಈ ಸಂಧರ್ಭದಲ್ಲಿ ವರಿಷ್ಟರ ತೀರ್ಮಾನವನ್ನು ಪ್ರಶ್ನಿಸುವ ದುಸ್ಸಾಹಸ ಮಾಡಬೇಡಿ ಎಂದು ಮನವರಿಕೆ ಮಾಡಿಸಿದರು. ಮುಂದಿನ ದಿನಗಳಲ್ಲಿ ನಿಮಗೆ ಉತ್ತಮ ಭವಿಷ್ಯವಿದೆ, ಎಂದು ಸಿಎಂ ಅವರು ಅಭಯ ನೀಡಿದ್ದಾರೆ. ಕೊನೆಗೆ ಶ್ರೀರಾಮುಲು ಅವರು ಈ ಖಾತೆಯ ವಿವಾದಕ್ಕೆ ಒಲ್ಲದ ಮನಸ್ಸಿಂದಲೇ  ಪೂರ್ಣವಿರಾಮವಿಟ್ಟಿದ್ದಾರೆ.

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.