• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜನರಲ್ಲಿ ಆಂತಕ ಸೃಷ್ಟಿಸಿದ ಚಾರ್ಮಾಡಿ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಜನರಲ್ಲಿ ಆಂತಕ ಸೃಷ್ಟಿಸಿದ ಚಾರ್ಮಾಡಿ
0
SHARES
0
VIEWS
Share on FacebookShare on Twitter

ಚಿಕ್ಕಮಗಳೂರು, ಅ. 23: ಕರ್ನಾಟಕದಲ್ಲಿ ಕಣ್ಮನ ಸೆಳೆಯುವ ಘಾಟ್‌ ಎಂದರೆ ಅದು ಕಾಫಿನಾಡು ಚಿಕ್ಕಮಗಳೂರು ಹಾಗೂ ಬಂದರು ನಗರಿ ದಕ್ಷಿಣ ಕನ್ನಡ ಜಿಲ್ಲೆಗಳ ಪ್ರಮುಖ ಕೊಂಡಿಯಾಗಿರುವ ಚಾರ್ಮಾಡಿ ಘಾಟ್‌. ಇದು ಇತ್ತೀಚೆಗೆ ಅಪಾಯದಂಚಿನಲ್ಲಿದೆ. ಕಳೆದ ಎರಡು ವರ್ಷಗಳಲ್ಲಿ ಚಾರ್ಮಾಡಿ ಘಾಟ್ ಗೆ ಬಿದ್ದಿರುವ ಹೊಡೆತ ಅಷ್ಟಿಷ್ಟಲ್ಲ. 2019ರ ಮಹಾಮಳೆಗೆ ಇಡೀ ಚಾರ್ಮಾಡಿ ಘಾಟ್ ಅಲ್ಲೋಲ ಕಲ್ಲೋಲವಾಗಿತ್ತು. ಒಮ್ಮೆ ಮಳೆ ಬಂದರೂ ಸಾಕು, ಚಾರ್ಮಾಡಿ ಘಾಟ್‌ ಬಂದ್‌ ಆಗುತ್ತದೆ.

30ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತ ಉಂಟಾಗಿ, ಬರೋಬ್ಬರಿ 6 ತಿಂಗಳು ಚಾರ್ಮಾಡಿ ಘಾಟ್ ರಸ್ತೆ ಬಂದ್ ಆಗಿತ್ತು. ಇತಿಹಾಸದಲ್ಲಿ ಎಂದೂ ಕಂಡರಿಯದ ರೀತಿಯಲ್ಲಿ ಈ ರಸ್ತೆ ಘಾಸಿಯಾಗಿತ್ತು. ಆ ಬಳಿಕ ಈ ಬಾರಿಯ ಮಳೆಗಾಲದಲ್ಲೂ ಅಲ್ಲಲ್ಲಿ ಗುಡ್ಡ ಕುಸಿತವಾಗಿ ಅನೇಕ ಸಲ ಚಾರ್ಮಾಡಿ ಘಾಟ್ ಬಂದ ಆಗಿತ್ತು.

ಇದೀಗ ಮಳೆ ಬಿಟ್ಟಿದೆ ಭಾರೀ ವಾಹನಗಳನ್ನ ಹೊರತುಪಡಿಸಿ ಬಸ್, ಕಾರು, ಜೀಪ್, ಟಿಟಿ, ಬೈಕ್ ಸೇರಿದಂತೆ ಲಘು ವಾಹನಗಳು ಸಂಚರಿಸುತ್ತಿವೆ. ಈ ಮಧ್ಯೆ ಮಳೆ ಇಲ್ಲದಿದ್ದರೂ ಅಲ್ಲಲ್ಲಿ ಭಾರೀ ಗಾತ್ರದ ಬಂಡೆಗಳು ರೋಡಿಗೆ ಅಪ್ಪಳಿಸುತ್ತಿವೆ. ಇತ್ತೀಚೆಗೆ ಕೂಡ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯ ಅಲೇಖಾನ್ ಗ್ರಾಮದ ಬಳಿ ಬೃಹತ್ ಬಂಡೆ ರಸ್ತೆಗೆ ಬಿದ್ದಿರುವುದು ಈ ಭಾಗದ ಸಂಚರಿಸುವ ಪ್ರಯಾಣಿಕರಲ್ಲಿ ಆತಂಕ ಉಂಟು ಮಾಡಿದೆ.

ಚಾರ್ಮಾಡಿ ಘಾಟ್​​ನ ಹಲವೆಡೆ ಈ ರೀತಿ ಗುಡ್ಡಕ್ಕೆ ಅಂಟಿಕೊಂಡಿರುವ ಬಂಡೆಗಳು ಸಡಿಲಗೊಂಡಿದ್ದು, ಈಗಲೋ ಆಗಲೋ ಬೀಳುವ ಸ್ಥಿತಿಯಲ್ಲಿವೆ. ಆದ್ದರಿಂದ ಈ ಭಾಗದಲ್ಲಿ ಸಂಚರಿಸುವ ಪ್ರಯಾಣಿಕರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಪಯಣಿಸುವ ಅನಿವಾರ್ಯತೆ ಎದುರಾಗಿದ್ದು ಭವಿಷ್ಯದಲ್ಲಿ ಚಾರ್ಮಾಡಿ ರಸ್ತೆ ಉಳಿಯುತ್ತಾ ಎನ್ನುವ ಅನುಮಾನ ಸ್ಥಳೀಯರದ್ದಾಗಿದೆ.

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭಾರೀ ಮಳೆಯಾಗುತ್ತಿರುವ ಸಂದರ್ಭದಲ್ಲಿ ಇತ್ತೀಚೆಗೆ ಬಂಡೆಗಳು ಬೀಳುವುದು ಸಾಮಾನ್ಯವಾಗಿ ಬಿಟ್ಟಿದೆ. ಆದರೆ, ಬಿಸಿಲಿನ ಸಂದರ್ಭದಲ್ಲೂ ಬಂಡೆಗಳು ಮೇಲಿಂದ ರಸ್ತೆಗೆ ಬೀಳುತ್ತೆ ಅಂದರೆ ಎಂತಹವರು ಕೂಡ ಈ ರಸ್ತೆಯಲ್ಲಿ ಸಂಚರಿಸಲು ಒಂದು ಕ್ಷಣ ಯೋಚನೆ ಮಾಡುವಂತಾಗಿದೆ. ಕಳೆದ ಬಾರಿಯ ಮಳೆಗೆ ಹಾನಿಯಾಗಿರುವ ರಸ್ತೆಯನ್ನ ಸರ್ಕಾರ ಕೂಡ ಶಾಶ್ವತವಾಗಿ ಸರಿಮಾಡುವ ಗೋಜಿಗೆ ಹೋಗಿಲ್ಲ. ಈ ಮಧ್ಯೆ ಮೇಲಿಂದ ಬಂಡೆಗಳು ಉರುಳುತಿರುವುದು ಜನಸಾಮಾನ್ಯರಲ್ಲಿ ಇನ್ನಿಲ್ಲದ ಆತಂಕವನ್ನು ಸೃಷ್ಟಿಸಿದೆ.

Related News

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.