• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ದಿಗಂತ್ ಹರಿಪ್ರಿಯಾ ಚಿತ್ರದ ಮುಹೂರ್ತ

Sharadhi by Sharadhi
in ಪ್ರಮುಖ ಸುದ್ದಿ, ಮನರಂಜನೆ
ದಿಗಂತ್ ಹರಿಪ್ರಿಯಾ ಚಿತ್ರದ ಮುಹೂರ್ತ
0
SHARES
0
VIEWS
Share on FacebookShare on Twitter

ಬೆಂಗಳೂರು, ಅ. 17: ದಿಗಂತ್ ಮತ್ತು ಹರಿಪ್ರಿಯ ಜೋಡಿಯ ಹೊಸ ಚಿತ್ರದ ಮುಹೂರ್ತ ಇಂದು ಮುಂಜಾನೆ ನೆರವೇರಿದ್ದು, ಇನ್ನೂ ಹೆಸರಿಡದ ಚಿತ್ರದ ಮಾಧ್ಯಮಗೋಷ್ಠಿಯು ಅರಮನೆ ಮೈದಾನದ ‘ಗಾಯತ್ರಿ ವಿಹಾರ’ದ ಆವರಣದೊಳಗೆ ಅದ್ದೂರಿಯಾಗಿ ನೆರವೇರಿತು.

ಚಿತ್ರದ ನಾಯಕಿ ಹರಿಪ್ರಿಯಾ ಮಾತನಾಡಿ “ಇದು ತೆಲುಗು ಚಿತ್ರದ ರಿಮೇಕ್. ಅನಿರೀಕ್ಷಿತವಾಗಿ ನಡೆದ ಕೊಲೆಯೊಂದರ ಸುತ್ತ ಹೆಣೆಯಲಾದ ಕಥೆ. ಒಂದೊಂದು ಪಾತ್ರವು ಕೂಡ ಅನುಮಾನಾಸ್ಪದವಾಗಿ ಬಂದು ಹೋಗುತ್ತದೆ. ಚಿತ್ರದಲ್ಲಿ ಹಲವು ತಿರುವುಗಳು ಬರುತ್ತವೆ. ಆತಂಕ, ಕುತೂಹಲ ಹೆಜ್ಜೆ ಹೆಜ್ಜೆಗೂ ಸಾಗುತ್ತಲೇ ಹೋಗುತ್ತದೆ” ಎಂದರು. ನಾಯಕ ದಿಗಂತ್ “ಚಿತ್ರೋದ್ಯಮ ಸಂಕಷ್ಟದಲ್ಲಿರುವ ಇಂತಹ ಸಮಯದಲ್ಲಿ ಚಿತ್ರ ಮಾಡುತ್ತಿರುವುದು ಪ್ರಶಂಸಾರ್ಹ. ಇದು ಹಲವಾರು ಭಾಷೆಗಳಲ್ಲಿ ಬಂದಿರುವ ಸಿನಿಮಾ. ನನಗೆ ಎರಡು ಶೇಡ್ಸ್ ಇವೆ. ಅದು ಯಾವುದು ಎಂದು ರಿವೀಲ್ ಮಾಡುವಂತಿಲ್ಲ. ಹೈದರಾಬಾದ್, ತೆಲಂಗಾಣದಲ್ಲಿ ಚಿತ್ರೀಕರಣ ಈಗಾಗಲೇ ಶುರು ಆಗಬೇಕಿತ್ತು. ಅಲ್ಲಿ ಮಳೆ ಇರುವುದರಿಂದ ಶೂಟಿಂಗ್ ಮುಂದೆ ಹಾಕಲಾಗಿದೆ. ಮೂಲ ಚಿತ್ರಕ್ಕಿಂತ ಸಣ್ಣ ಪುಟ್ಟ ಬದಲಾವಣೆ ಮಾಡಿರುವುದು ಖುಷಿಯಿದೆ” ಎಂದರು.

ರಾಜೇಶ್ ಅಗರ್ವಾಲ್ ಮತ್ತು ಡಿ.ಜಯಪ್ರಕಾಶ್ ರಾವ್ ಸೇರಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಅಶೋಕ್ ತೇಜ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ತೆಲುಗಿನಲ್ಲಿ ಒಂದು ಚಿತ್ರವನ್ನು ನಿರ್ದೇಶಿಸಿರುವ ಅಶೋಕ್ ತೇಜ ಅವರಿಗೆ ಇದು ಪ್ರಥಮ ಕನ್ನಡ ಚಿತ್ರ. ತಾಂತ್ರಿಕ ವರ್ಗದಲ್ಲಿ ಛಾಯಾಗ್ರಾಹಕರಾಗಿ ಯೋಗಿ, ಸಂಗೀತ ನಿರ್ದೇಶಕರಾಗಿ ಚರಣ್, ಸಂಕಲನಕಾರರಾಗಿ ಕೆಜಿಎಫ್ ಖ್ಯಾತಿಯ ಶ್ರೀಕಾಂತ್ , ಸಂಭಾಷಣೆಕಾರರಾಗಿ ಸುಬ್ರಹ್ಮಣ್ಯ ಸುಕೃತ್ ಮೊದಲಾದವರಿದ್ದಾರೆ. ಚಿತ್ರಕ್ಕೆ ಕಲಾ ನಿರ್ದೇಶಕರು ರಾಜೀವ್ ನಾಯರ್ ಮತ್ತು ಸಾಹಸ ನಿರ್ದೇಶಕರಾಗಿ ರಿಯಲ್ ಸತೀಶ್ ಕಾರ್ಯನಿರ್ವಹಿಸಲಿದ್ದಾರೆ. ಮಾಧ್ಯಮಗೋಷ್ಠಿಗೆ ನಿರ್ದೇಶಕ ಮುಹೂರ್ತ ಭಟ್ ಅವರು ಅತಿಥಿಗಳಾಗಿ ಆಗಮಿಸಿದ್ದರು.

Related News

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023
ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.