ಬೆಂಗಳೂರು: ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಮಹಾಮಾರಿ ಕೊರೊನಾ ರಾಜ್ಯದಲ್ಲಿ ಬುಧವಾರ ಮರಣ ಮೃದಂಗ ಬಾರಿಸಿದೆ. ರಾಜ್ಯದಲ್ಲಿ ಈಗಾಗಲೇ ತಲ್ಲಣ ಸೃಷ್ಟಿಸಿರುವ ಕೊರೊನಾ ಸೋಂಕಿಗೆ ಇಂದು ಒಂದೇ ದಿನ ಬರೋಬ್ಬರಿ 87 ಮಂದಿ ಜನರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 929ಕ್ಕೆ ಏರಿಕೆಯಾಗಿದೆ. ಕೊರೊನಾ ವೈರಸ್ನಿಂದಾಗಿ ಕಳೆದ 24 ಗಂಟೆಗಳಲ್ಲಿ ರಾಜ್ಯ ರಾಜಧಾನಿಯಲ್ಲಿ 60 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 87 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ. ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1975 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 3176 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 47,253ಕ್ಕೆ ಏರಿಕೆಯಾಗಿದೆ.ಇನ್ನೂ ಕಳೆದ 24 ಗಂಟೆಗಳಲ್ಲಿ 1076 ಮಂದಿ ಗುಣಮುಖರಾಗಿದ್ದು, 18466 ಜನರು ಸೋಂಕಿನಿಂದ ಚೇತರಿಕೆ ಕಂಡಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.
ಮತ್ತೆ ಮರಣ ಮೃದಂಗ ಬಾರಿಸಿದ ಮಹಾಮಾರಿ ಕೊರೊನಾ
-
By Kiran K
- Categories: ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್
Related Content
SSLC ಗ್ರೇಸ್ ಅಂಕ ನೀಡಿದ್ದಕ್ಕೆ ಸಿಎಂ ಸಿದ್ಧರಾಮಯ್ಯ ಗರಂ: ಮುಂದಿನ ವರ್ಷ ಹೀಗಾಗದು ಎಂದ ಶಿಕ್ಷಣ ಮಂತ್ರಿ
By
Bhavya
May 17, 2024
ಬಡ ಕುಟುಂಬದ ಮಹಿಳೆಗೆ ವಾರ್ಷಿಕ ಒಂದು ಲಕ್ಷ ನೀಡುವುದೇ ನಮ್ಮ ಮೊದಲ ಆದ್ಯತೆ ಎಂದ ರಾಹುಲ್ ಗಾಂಧಿ
By
Bhavya
May 17, 2024
ಬ್ಯಾನ್.. ಬ್ಯಾನ್..: ಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ!
By
Bhavya
May 17, 2024
ಇನ್ನೆರಡು ದಿನ ಬೆಂಗಳೂರಿನಲ್ಲಿ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ
By
Bhavya
May 17, 2024