• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮಹಾರಾಷ್ಟ್ರೀಯರು ಕರ್ನಾಟಕ ರಾಜ್ಯೋತ್ಸವವನ್ನು ಕಪ್ಪು ದಿನವನ್ನಾಗಿ ಆಚರಿಸಲು ನಿರ್ಧಾರ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಮಹಾರಾಷ್ಟ್ರೀಯರು ಕರ್ನಾಟಕ ರಾಜ್ಯೋತ್ಸವವನ್ನು ಕಪ್ಪು ದಿನವನ್ನಾಗಿ ಆಚರಿಸಲು ನಿರ್ಧಾರ
0
SHARES
0
VIEWS
Share on FacebookShare on Twitter

ಬೆಳಗಾವಿ, ಅ.31: ಬೆಳಗಾವಿಯಲ್ಲಿ ಕನ್ನಡಿಗರು ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಸಕಲ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ.  ಆದರೆ ಇಲ್ಲಿ ಮಹಾರಾಷ್ಟ್ರೀಯರು ಕನ್ನಡ ರಾಜ್ಯೋತ್ಸವವನ್ನು ಕಪ್ಪು ದಿನವನ್ನಾಗಿ ಆಚರಿಸಲು ನಿರ್ಧಾರ ಮಾಡಿದ್ದಾರೆ.  ನವೆಂಬರ್ 1ರಂದು ರಾಜ್ಯಾದ್ಯಂತ  ಸಂಭ್ರಮ, ಸಡಗರ ತುಂಬಿರುತ್ತದೆ.  ನಾಡಿನ ಪ್ರತಿಯೊಬ್ಬರು ಕನ್ನಡ ಉತ್ಸವ ಆಚರಣೆಗೆ ಸಿದ್ಧರಾಗುತ್ತಿರುವ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಎಂಇಎಸ್​ ಕರಾಳ ದಿನ ಆಚರಿಸುತ್ತದೆ ಎಂದರೆ ಕನ್ನಡಿಗರು ಹೇಗೆ ಸುಮ್ಮನಿರುತ್ತಾರೆ? ಕನ್ನಡಿಗರು ಇದನ್ನು ತಡೆಯುವ ಉದ್ದೇಶದಿಂದ ಈ ವರ್ಷ ಈ ಕರಾಳದಿನ ಆಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದೆಂದು ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ.  ಇನ್ನೊಂದೆಡೆ ಕರಾಳ ದಿನ ಆಚರಣೆಗೆ ಅನುಮತಿ ಪಡೆಯಲು ಈಗಾಗಲೇ ಎಂಇಎಸ್ ಸಂಘಟನೆ ಹರಸಾಹಸ ಮಾಡುತ್ತಿದೆ. ಇದರ ಮದ್ಯೆ  ಮಹಾರಾಷ್ಟ್ರ ಗಡಿಯ ಉಸ್ತುವಾರಿ ಸಚಿವರಾದ  ಏಕನಾಥ್ ಶಿಂಧೆ  ಅವರು ಹೊಸ ಕ್ಯಾತೆಯನ್ನು ಆರಂಭಿಸಿದ್ದಾರೆ. ನವೆಂಬರ್ 1ರಂದು ಮಹರಾಷ್ಟ್ರ ಎಲ್ಲ ಸಚಿವರು ಕಪ್ಪು ಬಟ್ಟೆಯನ್ನು  ಧರಿಸಿ ಕರ್ನಾಟಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಸಚಿವ ಏಕನಾಥ್ ಶಿಂಧೆ ರಾಜ್ಯದ ಎಲ್ಲ ಸಚಿವರಿಗೆ ಈ ಬಗ್ಗೆ ಪತ್ರ ಬರೆದು ಮನವಿಯನ್ನು ಮಾಡಿದ್ದಾರೆಂದು ತಿಳಿದು ಬಂದಿದೆ.  ಕರ್ನಾಟಕದಲ್ಲಿ ಮರಾಠಿಗರಿಗೆ  ಅನ್ಯಾಯವಾಗುತ್ತಿದೆ. ಇದನ್ನು ತಡೆಯಲು ಕರ್ನಾಟಕದಲ್ಲಿ ಕರಾಳ ದಿನ ಆಚರಣೆ ನಡೆದುಕೊಂಡು ಬಂದಿದೆ. ಇದೀಗ ಇದಕ್ಕೆ ಅನುಮತಿಯನ್ನು ಕರ್ನಾಟಕ ಸರ್ಕಾರ ನೀಡಿಲ್ಲ.  ಸುಪ್ರೀಂ ಕೋರ್ಟ್ ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತಿದೆ ಎಂದು ಸಚಿವ ಏಕನಾಥ್ ಶಿಂಧೆ ಹೇಳಿದ್ದಾರೆ. ಕರಾಳ ದಿನದಂದು ಮಹಾರಾಷ್ಟ್ರದ ಎಲ್ಲ ಸಚಿವರು ಕಪ್ಪು ಬಟ್ಟೆಯನ್ನು ಧರಿಸಿ ಕೆಲಸ ನಿರ್ವಹಿಸಬೇಕು ಎಂದು ನಾವು ಮನವಿ ಮಾಡಿದ್ದೇವೆ. ಮರಾಠಿಗರಿಗೆ  ನ್ಯಾಯ ಸಿಗುವವರೆಗೂ  ನಾವು ಅವರ ಜತೆಗೆ ಇದ್ದೇವೆ ಎಂದು ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಏಕನಾಥ್ ಶಿಂಧೆ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಶಿವಸೇವೆ, ಎನ್‌ಸಿಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಸಮ್ಮಿಶ್ರ ಸರ್ಕಾರವಿದೆ. ಶಿವಸೇನೆ ಹಾಗೂ  ಎನ್ ಸಿ ಪಿ ಕರ್ನಾಟಕದ ವಿರುದ್ಧ ನಿರಂತವಾಗಿ ಇಂತಹ ಕೆಲಸಗಳನ್ನು ಮಾಡಿಕೊಂಡು ಬಂದಿದೆ. ಆದರೆ ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್ ಪಕ್ಷದ ನಿಲುವು ಈ ವಿಚಾರದಲ್ಲಿ ಏನು ಎಂಬುದು ಇದೀಗ ದೊಡ್ಡ ಪ್ರಶ್ನೆ ಉದ್ಭವಿಸಿದೆ.

ಮಹಾರಾಷ್ಟ್ರದ ಸಚಿವ ಏಕನಾಥ್ ಶಿಂಧೆ ಹೇಳಿಕೆಗೆ ಬೆಳಗಾವಿ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರ ತನ್ನ  ನೀಚ  ಪ್ರವೃತ್ತಿಯನ್ನು ಪ್ರದರ್ಶಿಸುತ್ತಿದೆ. ಇಲ್ಲಿನ ಜನಪ್ರತಿನಿಧಿಗಳು ಮಾತ್ರ ಮಹಾರಾಷ್ಟ್ರ ಸರ್ಕಾರದ ಜೊತೆಗೆ ಒಳ್ಳೆಯ ಸಂಬಂಧ ಹೊಂದಿದ್ದಾರೆ. ಕನ್ನಡಿಗರನ್ನು ಕನ್ನಡಿಗರನ್ನು ಮಾತ್ರ ಅವಮಾನಿಸುವ ಕೆಲಸವನ್ನು ಮಾಡುತ್ತಿದ್ದಾರೆ. ನಗರ ಪಾಲಿಕೆ, ಪಂಚಾಯಿತಿ ಚುನಾವಣೆಯನ್ನು ಮುಂದಿಟ್ಟುಕೊಂಡು ರಾಜಕೀಯ ಆಟ ಆಡುತ್ತಿದ್ದಾರೆ.  ಈ ಬಗ್ಗೆ ಸಿಎಂ, ಜಿಲ್ಲಾ ಉಸ್ತುವಾರಿ ಸಚಿವರು ಮಹಾರಾಷ್ಟ್ರ ಸರ್ಕಾರಕ್ಕೆ ಬುದ್ದಿ ಹೇಳಬೇಕಾಗಿದೆ.

ಮಹಾರಾಷ್ಟ್ರದ ಲೋಕೋಪಯೋಗಿ ಸಚಿವ ಹಾಗೂ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಗಳ ಸಚಿವ ಏಕನಾಥ್ ಶಿಂಧೆ, ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿ, ನಾಳೆ ಎಲ್ಲಾ ಸಚಿವರು ತಮ್ಮ ಕೈಗೆ ಕಪ್ಪು ಬ್ಯಾಂಡ್ ನ್ನು ಕಟ್ಟಿ ಬೆಳಗಾವಿಯಲ್ಲಿ ಮರಾಠಿಗರ ಹೋರಾಟವನ್ನು ಬೆಂಬಲಿಸಬೇಕೆಂದು ಕರೆ ನೀಡಿದೆ.

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !
Vijaya Time

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

June 10, 2023
bill
ರಾಜ್ಯ

ಇಂಧನ ಹೊಂದಾಣಿಕೆ ಶುಲ್ಕ ನೆಪ, ಡಬಲ್ ಆಯ್ತು ಕರೆಂಟ್ ಬಿಲ್ ; ಹಲವೆಡೆ ಪ್ರತಿಭಟನೆ

June 10, 2023
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.