ಬೆಂಗಳೂರು,ನ.17 : ಪರೀಕ್ಷಾರ್ಥಿಗಳ ಅನುಕೂಲಕ್ಕಾಗಿ ಬಿಎಸ್ ಯಡಿಯೂರಪ್ಪ ಅವರು ವೇಳಾಪಟ್ಟಿಯನ್ನು ಬದಲಾವಣೆ ಮಾಡಿದ್ದಾರೆ. ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಪರೀಕ್ಷೆಗಳು ಒಂದೇ ದಿನ ನಿಗದಿಯಾಗಿತ್ತು. ಇದು ವಿದ್ಯಾರ್ಥಿಗಳ ಗೊಂದಲಕ್ಕೆ ಕಾರಣವಾಗಿತ್ತು. ಇಂತಹ ಡಿಸೆಂಬರ್ನಲ್ಲಿ ನಿಗದಿಯಾಗಿದ್ದಂತಹ ಕೆಪಿಎಸ್ಸಿ ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿಕೆ ಮಾಡಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ. ಈ ಮೂಲಕ ಕೆಪಿಎಸ್ಸಿ ಹಾಗೂ ಯುಪಿಎಸ್ಸಿ ಪರೀಕ್ಷಾ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಕೇಂದ್ರ ಲೋಕಸೇವಾ ಅಯೋಗದ ಪರೀಕ್ಷೆಗಳು 2021ರ ಜನವರಿ 8 ರಿಂದ 10 ರವರೆ ಹಾಗೂ 16, 17 ರಂದು ನಡೆಯಲಿದೆ. ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆಗಳು 2020 ರ ಡಿಸೆಂಬರ್ 21 ರಿಂದ 24 ಮತ್ತು ಜನವರಿ 02 ರಿಂದ 05 ರವರೆಗೆ ನಿಗದಿಯಾಗಿವೆ.
ಕೆಪಿಎಸ್ಸಿ ಮತ್ತು ಯುಪಿಎಸ್ಸಿ ಪರೀಕ್ಷೆಗಳ ಮಧ್ಯೆ ಕಡಿಮೆ ದಿನಗಳ ಅಂತರವಿರುವ ಕಾರಣ ಎರಡೂ ಪರೀಕ್ಷೆ ತೆಗೆದುಕೊಂಡ ಅಭ್ಯರ್ಥಿಗಳಿಗೆ ಸಿದ್ಧತೆ ನಡೆಸಲು ಕಷ್ಟವಾಗುತ್ತಿತ್ತು. ಈ ಹಿನ್ನೆಲೆ ಅಭ್ಯರ್ಥಿಗಳು ‘ಕೆಪಿಎಸ್ಸಿ ವೇಳಾಪಟ್ಟಿಯನ್ನು ಪರಿಶೀಲನೆ ನಡೆಸಿ ಪರೀಕ್ಷೆಯನ್ನು ಕನಿಷ್ಠ ಒಂದು ತಿಂಗಳು ಮುಂದೂಡಬೇಕೆಂದು’ ಅಭ್ಯರ್ಥಿಗಳು ಆಗ್ರಹಿಸಿದ್ದರು.
ಯುಪಿಎಸ್ಸಿ ಸಿವಿಲ್ ಪರೀಕ್ಷೆಗಳಿಗೆ ತಯಾರಿ ನಡೆಸುವವರು ಕೆಎಎಸ್ ಪರೀಕ್ಷೆಗಳಿಗೂ ಸಿದ್ಧತೆ ನಡೆಸುತ್ತಿರುತ್ತಾರೆ. ಆದರೆ ಸಿದ್ಧತೆ ಸಂಪೂರ್ಣವಾಗಿ ಭಿನ್ನವಾಗಿರುತ್ತದೆ. ನಿರಂತರವಾಗಿ ಪರೀಕ್ಷೆಗಳನ್ನು ಎದುರಿಸಬೇಕಾದಾಗ ತಯಾರಿಯಲ್ಲಿ ಕೆಪಿಎಸ್ಸಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ನಿಗದಿ ಪಡಿಸಬೇಕಿತ್ತು ಉದ್ಯೋಗಾಕಾಂಕ್ಷಿಗಳು ಆಗ್ರಹಿಸಿದ್ದರು.
ಇಂತಹ ಉದ್ಯೋಗಾಕಾಂಕ್ಷಿಗಳ ಆಗ್ರಹಕ್ಕೆ ಮಣಿದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಯುಪಿಎಸ್ಸಿ ಪರೀಕ್ಷೆಗಳ ಜೊತೆಗೆ ನಿಗಧಿಯಾಗಿದ್ದಂತ ಕೆಪಿಎಸ್ಸಿಯ ಪರೀಕ್ಷೆಗಳನ್ನು ಒಂದು ತಿಂಗಳು ಮುಂದೂಡಿಕೆ ಮಾಡಲು ಸೂಚನೆ ನೀಡಿದ್ದಾರೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.