• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಿಎಂ ಹಾಗೂ ಆರೋಗ್ಯ ಸಚಿವರ ಸಹಾಯದಿಂದ ನಿರಾತಂಕವಾಗಿ ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿನಿ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಸಿಎಂ ಹಾಗೂ ಆರೋಗ್ಯ ಸಚಿವರ ಸಹಾಯದಿಂದ ನಿರಾತಂಕವಾಗಿ ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿನಿ

ನೀಟ್‌ ಪರೀಕ್ಷೆ ಬರೆದ ಶಿವಮೊಗ್ಗದ ವಿದ್ಯಾರ್ಥಿನಿ ತನುಜಾ

0
SHARES
0
VIEWS
Share on FacebookShare on Twitter

ಬೆಂಗಳೂರು, ಅ. 14: ಕೋವಿಡ್ ಕಾರಣದಿಂದಾಗಿ ನೀಟ್ ಪರೀಕ್ಷೆ ಬರೆಯಲು ಸಾಧ್ಯವಾಗದೆ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದ ವಿದ್ಯಾರ್ಥಿನಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಹಾಯ ಹಸ್ತ ಚಾಚಿದ್ದಾರೆ. ಇವರಿಬ್ಬರ ಮಧ್ಯಪ್ರವೇಶದಿಂದಾಗಿ ವಿದ್ಯಾರ್ಥಿನಿ ನಿರಾತಂಕವಾಗಿ ಇಂದು ಪರೀಕ್ಷೆ ಬರೆದಿದ್ದಾಳೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಮಲ್ಲೇನಹಳ್ಳಿಯ ವಿದ್ಯಾರ್ಥಿನಿ ತನುಜ ಕರೇಗೌಡ್ರ ಬೆಂಗಳೂರಿನ ಬಸವನಗುಡಿಯ ಕೇಂದ್ರದಲ್ಲಿ ನೀಟ್ ಪರೀಕ್ಷೆ ಬರೆದಿದ್ದಾಳೆ. ಕೋವಿಡ್ ಕಾರಣದಿಂದಾದ ಬದಲಾವಣೆಗಳು ತನುಜಾಗೆ ನೀಟ್ ಪರೀಕ್ಷೆ ಬರೆಯಲು ಅಡ್ಡಿಯಾಗಿತ್ತು. ಈ ಸಮಸ್ಯೆಯನ್ನರಿತು ಮಧ್ಯಪ್ರವೇಶಿಸಿದ ಮುಖ್ಯಮಂತ್ರಿಗಳು ಹಾಗೂ ಸಚಿವರು ಯಾವುದೇ ಅಡ್ಡಿ, ಆತಂಕಗಳಿಲ್ಲದೆ ಆಕೆ ಪರೀಕ್ಷೆ ಬರೆಯುವಂತೆ ಮಾಡಿದ್ದಾರೆ.

ಆಗಿದ್ದೇನು? : ಶಿವಮೊಗ್ಗದ ನವೋದಯ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಪ್ರತಿಭಾವಂತ ವಿದ್ಯಾರ್ಥಿನಿ ತನುಜಾ ವೈದ್ಯೆಯಾಗಿ ಸಮಾಜದ ಸೇವೆ ಮಾಡುವ ಕನಸು ಹೊತ್ತಿದ್ದಾಳೆ. ಈಕೆಯ ತಂದೆ ನಾಗರಾಜ್ ಕೃಷಿಕರಾಗಿದ್ದು, ಮಗಳಿಗೆ ಉತ್ತಮ ಶಿಕ್ಷಣ ನೀಡಿದ್ದಾರೆ. ಕಳೆದ ವರ್ಷ ತನುಜಾ ಪಿಯುಸಿ ಮುಗಿಸಿದ್ದು, ಈಕೆಯ ಪ್ರತಿಭೆ ಮೆಚ್ಚಿದ್ದ ನವೋದಯ ಶಾಲೆಯ ಆಡಳಿತ ಮಂಡಳಿ ಪುಣೆಯಲ್ಲಿ ನಡೆಯುವ ಕೋಚಿಂಗ್‍ಗೂ ಈಕೆಯನ್ನು ಆಯ್ಕೆ ಮಾಡಿತ್ತು.

ಸೆಪ್ಟೆಂಬರ್ 13ರಂದು ಎನ್‍ಟಿಎ (ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ) ನೀಟ್ ಪರೀಕ್ಷೆ ಏರ್ಪಡಿಸಿತ್ತು. ಈ ವೇಳೆ ತನುಜ ಅವರ ಮನೆಯ ಬಳಿ ಕಂಟೇನ್ಮೆಂಟ್ ವಲಯವನ್ನು ಘೋಷಿಸಲಾಗಿತ್ತು. ಜತೆಗೆ, ತನುಜಗೂ ಜ್ವರ ಬಂದಿದ್ದರಿಂದ ಪರೀಕ್ಷೆಗೆ ಕುಳಿತುಕೊಳ್ಳಲು ಸಾಧ್ಯವಾಗಿರಲಿಲ್ಲ. ಇದರಿಂದ ತನುಜಾಳ ಆಸೆ ಕಮರಿಹೋಗುವ ಆತಂಕ ಉಂಟಾಗಿತ್ತು. ಆದರೆ ನಂತರ ಸುಪ್ರಿಂ ಕೋರ್ಟ್ ನಿರ್ದೇಶನದ ಮೇರೆಗೆ, ಎನ್‍ಟಿಎ ಮತ್ತೊಮ್ಮೆ ಪರೀಕ್ಷೆ ಏರ್ಪಡಿಸಿತು. ಆದರೆ ಈ ಬಾರಿ ಪರೀಕ್ಷೆ ಬರೆಯಲು ಕೋವಿಡ್ ಸಂಬಂಧಿತ ವರದಿ ಹಾಗೂ ಕೆಲ ದಾಖಲೆಗಳನ್ನು ಇ-ಮೇಲ್ ಮೂಲಕ ಕಳುಹಿಸಬೇಕು ಎಂದು ಎನ್‍ಟಿಎ ಸೂಚಿಸಿತ್ತು.


ಈ ಅವಕಾಶದಿಂದ ಮತ್ತೆ ಸಂತಸಗೊಂಡ ತನುಜಾ, ಎಲ್ಲಾ ದಾಖಲೆಗಳನ್ನು ಇ-ಮೇಲ್ ಮಾಡಲು ಉತ್ಸುಕಳಾಗಿದ್ದಳು. ಆದರೆ ಹಳ್ಳಿಯಲ್ಲಿನ ನೆಟ್ ವರ್ಕ್ ಸಮಸ್ಯೆ ಹಾಗೂ ಕೋವಿಡ್ ವರದಿಗೆ ಸಂಬಂಧಿಸಿದ ಕೆಲ ತಾಂತ್ರಿಕ ಸಮಸ್ಯೆಗಳಿಂದಾಗಿ ಸರಿಯಾದ ಸಮಯದಲ್ಲಿ ಇ-ಮೇಲ್ ಕಳುಹಿಸಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ಪರೀಕ್ಷೆ ಬರೆಯಲು ಇದ್ದ ಮತ್ತೊಂದು ಅವಕಾಶವೂ ನೆಲ ಕಚ್ಚಿತ್ತು.
ಈ ಸಮಸ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿನಿ ತನುಜ ಹೇಳಿಕೊಂಡಿದ್ದನ್ನು ಗಮನಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಡಾ.ಕೆ.ಸುಧಾಕರ್, ಮಧ್ಯಪ್ರವೇಶಿಸಿ ಸಹಾಯ ಮಾಡಿದ್ದಾರೆ. ಮುಖ್ಯಮಂತ್ರಿಗಳು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಚನೆ ನೀಡಿದ್ದಾರೆ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಎನ್ ಟಿಎ ತಾಂತ್ರಿಕ ನಿರ್ದೇಶಕರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸುವ ಮೂಲಕ ವಿದ್ಯಾರ್ಥಿನಿ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ.


ಮಗಳು ಇನ್ನು ನೀಟ್ ಪರೀಕ್ಷೆ ಬರೆಯಲು ಸಾಧ್ಯವೇ ಇಲ್ಲ ಎಂಬ ಆತಂಕ ಉಂಟಾಗಿತ್ತು. ಆದರೆ ಸರಿಯಾದ ಸಮಯದಲ್ಲಿ ಸಿಎಂ, ಸಚಿವರು ಮಧ್ಯಪ್ರವೇಶ ಮಾಡಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ದಾಖಲೆಗಳನ್ನು ಸಲ್ಲಿಸುವುದು ತಡವಾಗಿದ್ದರಿಂದ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಪರೀಕ್ಷೆ ನಡೆಸುವ ಏಜೆನ್ಸಿಯವರು ಹೇಳಿದ್ದರು. ಸಿಎಂ ಹಾಗೂ ಸಚಿವರಿಗೆ ಹೃದಯಪೂರ್ವಕ ಧನ್ಯವಾದಗಳು” ಎಂದು ತನುಜಳ ತಾಯಿ ಹಿರಿಯಮ್ಮ ಕೃತಜ್ಞತೆ ತಿಳಿಸಿದ್ದಾರೆ.


ಅಲ್ಲದೇ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರ ಸಹಾಯದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ತನುಜಾ, ವೈದ್ಯೆಯಾಗಿ ಜನರ ಸೇವೆ ಮಾಡಬೇಕೆಂಬ ಮಹತ್ವಾಕಾಂಕ್ಷೆ ಇದೆ. ಈಗ ನೀಟ್ ಪರೀಕ್ಷೆಯನ್ನು ಯಾವುದೇ ಆತಂಕ ಇಲ್ಲದೆ ಬರೆದಿದ್ದೇನೆ. ಪರೀಕ್ಷೆ ಬಹಳ ಚೆನ್ನಾಗಿತ್ತು ಎಂದೆನಿಸಿದೆ. ಸಿಎಂ ಹಾಗೂ ಸಚಿವರಿಗೆ ಧನ್ಯವಾದ ತಿಳಿಸಿದ್ದಾಳೆ.

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.