ಬೆಂಗಳೂರು: ಶಿರಾದಲ್ಲಿ ನಾವು ಸೂತಕದ ಮನೆಯಲ್ಲಿದ್ದೇವೆ. ಹೀಗಿದ್ದೂ ನಾವು ಚುನಾವಣೆ ಎದುರಿಸಬೇಕಾದದ್ದು ನಮ್ಮ ದುರ್ವಿಧಿ. ನಾವು ನೋವಿನೊಂದಿಗೆ ಅನಿವಾರ್ಯವಾಗಿ ಚುನಾವಣೆ ಎದುರಿಸಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೋವು ವ್ಯಕ್ತಪಡಿಸಿದ್ದಾರೆ.
ಇವತ್ತು ಟ್ವೀಟ್ ಮಾಡಿದ ಹೆಚ್ಡಿಕೆ, ಶಿರಾ ಇತರರಿಗೆ ಪ್ರತಿಷ್ಠೆಯ ಕಣವಾಗಿರಬಹುದು. ಅವರಿಗೆ ಇದು ಲಾಭ ನಷ್ಟಗಳ ವಿಚಾರ. ಆದರೆ ನಾವು ಇಲ್ಲಿ ನೋವಿನೊಂದಿಗೆ ಗೆಲುವಿನ ಮೂಲಕ ಪರಿಹಾರ ಹುಡುಕಲು ಬಯಸುತ್ತೇವೆ ಎಂದಿದ್ದಾರೆ.
ಶಿರಾ ಮತ್ತು ರಾಜರಾಜೇಶ್ವರಿ ಕ್ಷೇತ್ರಗಳ ಚುನಾವಣೆ ದಿನಾಂಕ ಗೊತ್ತಾಗಿದ್ದು ಈ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ಅಚಲ ವಿಶ್ವಾಸ ಹೊಂದಿದ್ದು, ಸೂಕ್ತ ಹಾಗೂ ಸಮರ್ಥ ಅಭ್ಯರ್ಥಿಗಳನ್ನು ಶಿರಾ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳಿಗೆ ಶೀಘ್ರವಾಗಿ ಘೋಷಿಸುವುದಾಗಿ ಅವರು ಹೇಳಿದ್ದಾರೆ.
ಶಿರಾ ತಾವು ಗೆದ್ದ ಕ್ಷೇತ್ರವೂ ಹೌದು, ಸತ್ಯನಾರಾಯಣ ಅವರು ಇಲ್ಲಿ ಗೆದ್ದಿದ್ದರು. ಬಿಜೆಪಿ ಅಮಿಷಕ್ಕೆ ಒಳಗಾಗದೆ ಕ್ಷೇತ್ರವನ್ನು ಜೆಡಿಎಸ್ ಗೆ ಉಳಿಸಿಕೊಟ್ಟಿದ್ದರು. ನ್ಯಾಯಬದ್ಧವಾಗಿ ಶಿರಾ ನಾವೇ ಗೆಲ್ಲಬೇಕಾದ ಕ್ಷೇತ್ರವೆಂದು ಹೇಳಿದ್ದಾರೆ.
ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಶಿರಾ ನಮ್ಮದೇ ಕ್ಷೇತ್ರ. ರಾಜರಾಜೇಶ್ವರಿ ನಗರವೂ ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರ. ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಅಚಲವಾಗಿದೆ. ಸೂಕ್ತ, ನ್ಯಾಯ ಸಮ್ಮತ ಅಭ್ಯರ್ಥಿಗಳನ್ನು ಶೀಘ್ರವೇ ಪಕ್ಷ ಘೋಷಿಸುತ್ತದೆ.
— H D Kumaraswamy (@hd_kumaraswamy) September 30, 2020
1/3