ಮೈಸೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಗೆ ದಿವಂಗತ ಐ ಎ ಎಸ್ ಅಧಿಕಾರಿ ಡಿ ಕೆ ರವಿ ಅವರ ಪತ್ನಿ ಕುಸುಮಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ತೀವೃ ಕುತೂಹಲಗಳಿಂದ ಕಾಯುತ್ತಿದ್ದ ಜನರಿಗೆ ಇದೀಗ ಅಭ್ಯರ್ಥಿಯಾಗಿ ಕುಸುಮಾ ಅವರು ಕಣಕ್ಕಿಳಿಯಲಿದ್ದಾರೆ. ಬುಧವಾರದೊಳಗೆ ಅಭ್ಯರ್ಥಿ ಹೆಸರು ಅಧಿಕೃತವಾಗಿ ಘೋಷಣೆಯಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಮೈಸೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು “ಕುಸುಮಾ” ಅವರ ಸ್ಪರ್ಧೆಗೆ ಯಾರು ಬೇಕಾದರೂ ವಿರೋಧ ವ್ಯಕ್ತ ಪಡಿಸಬಹುದು.
ಆದ್ರೆ ನಮ್ಮ ಪಕ್ಷದ ಅಭ್ಯರ್ಥಿಗೆ ಓಟು ಕೊಡಿ ಎಂದು ಕೇಳುವುದು ನಮ್ಮ ಕರ್ತವ್ಯ. ವಿರೋಧ ಮಾಡುವವರನ್ನು ನಾವು ಬೇಡ ಅನ್ನುವುದಿಲ್ಲ. ಆರ್ ಆರ್ ನಗರ ಹಾಗೂ ಶಿರಾದಲ್ಲಿ ನಾವೇ ಗೆಲ್ಲುವುದು ಎಂದು ಹೇಳಿದರು.