ಎಸ್ ಎಸ್ ಎಲ್ ಸಿ ಪರೀಕ್ಷೆ ಬಳಿಕ ಲಾಕ್ ಡೌನ್

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿರೋ ಹಿನ್ನಲೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ತಕ್ಷಣ ರಾಜ್ಯದಲ್ಲಿ ಲಾಕ್ ಡೌನ್ ಮತ್ತಷ್ಟು ಬಿಗಿ ಮಾಡಲು ರಾಜ್ಯ ಸರ್ಕಾರ ತೀರ್ಮಾಣ ಕೈಗೊಂಡಿದೆ .

ಇದಕ್ಕೆ ಸಂಬಂಧಪಟ್ಟಂತೆ ತಜ್ಞರ ಸಮಿತಿ ಸಲಹೆ ನೀಡಿದ್ದು ಈಗಾಗಲೇ ಎಸ್ ಎಸ್ ಎಲ್ ಸಿ ಯ ಎರಡು ಪರೀಕ್ಷೆಗಳು ಮುಗಿದಿದೆ. ಜು.೪ ರಂದು ಪರೀಕ್ಷೆಗಳು ಮುಗಿಯೋದರಿಂದ  ಜು.೫ ರಿಂದ ಕಟ್ಟು ನಿಟ್ಟಿನ ಲಾಕ್ ಡೌನ್ ಕ್ರಮ ಕೈಗೊಂಡರೆ ಕೊರೋನಾ  ನಿಯಂತ್ರಣಕ್ಕೆ ಬರಬಹುದು ಎಂದು ತಜ್ಞರ ಸಮಿತಿಯಲ್ಲಿರುವ ನಾರಾಯಣ ಹೃದಯಾಲಯದ ಡಾ.ದೇವಿಪ್ರಸಾದ್ ಶೆಟ್ಟಿ, ಜಯ ದೇವ ಹೃದ್ರೋಗ ಸಂಸ್ಥೆಯ ಡಾ.ಸಿ.ಎನ್.ಮಂಜುನಾಥ್ ಸೇರಿದಂತೆ ಸಮಿತಿ ಸದಸ್ಯರು ಅಭಿಪ್ರಾಯ ಪಟ್ಟಿದ್ದಾರೆ.

ಶನಿವಾರ ಸಭೆಯಲ್ಲಿ ಮಾತನಾಡಿದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರು ವಾರದ ಪ್ರತಿ ಶನಿವಾರ ಹಾಗೂ ಭಾನುವಾರ  ಲಾಕ್ ಡೌನ್ ಆಗಲಿದೆ ಎಂದು ಹೇಳಿದ್ದಾರೆ ಜೊತೆಗೆ  ವೈರಸ್ ನಿಂದ ಬಳಲುತ್ತಿದ್ದ  ರೋಗಿಗಳಿಗೆ  ಇನ್ನೂ ಹೆಚ್ಚಿನ  ಬೆಡ್ ಗಳ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತೆ ಎಂದು ತಿಳಿಸಿದ್ದಾರೆ

Exit mobile version