ಐತಿಹಾಸಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿ ಭೂಮಿ ಪೂಜೆ

ಅಯೋಧ್ಯೆಯ ಐತಿಹಾಸಿಕ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೂಮಿ ಪೂಜೆ ನೆರವೇರಿಸಿದರು.

ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ವಿಶೇಷ ವಿಮಾನದ ಮೂಲಕ ಅಯೋಧ್ಯೆಗೆ ಆಗಮಿಸಿದರು. ಈ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ ಅವರು ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಿದರು.

ಮೊದಲಿಗೆ ಅಯೋಧ್ಯೆಯಲ್ಲಿರುವ ಹನುಮಾನ್ ಗುಡಿಯ ಹನುಮಾನ್ ದೇಗುಲಕ್ಕೆ ತೆರಳಿ ರಾಮಭಂಟ ಹನುಮಂತನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಾಲಯದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಳ್ಳಿಯ ಕಿರೀಟಧರಿಸಿ ಸನ್ಮಾನಿಸಲಾಯಿತು. ನಂತರ ರಾಮನ ದೇವಸ್ಥಾನಕ್ಕೆ ತೆರಳಿದ ಮೋದಿ, ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿ, ಸಾಷ್ಟಾಂಗ ನಮಸ್ಕಾರ ಮಾಡಿದರು.
ಇದೇ ವೇಳೆ ಶಿಲಾನ್ಯಾಸದ ಸ್ಮರಣಾರ್ಥ ಪಾರಿಜಾತ ಗಿಡ ನೆಟ್ಟು, ನೀರೆರೆದರು. ಈ ಎಲ್ಲಾ ಕಾರ್ಯಗಳನ್ನು ನೆರವೇರಿಸಿದ ಬಳಿಕ 12.30ಕ್ಕೆ ಆರಂಭಗೊಂಡ ಭೂಮಿಪೂಜೆ ಸಮಾರಂಭದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ, ಅಭಿಜಿತ್‍ ಮುಹೂರ್ತದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮೊದಲ ಬೆಳ್ಳಿ ಇಟ್ಟಿಗೆ ಪ್ರತಿಷ್ಠಾಪಿಸಿದರು.

Exit mobile version