ಮುಂಬೈ ಜ 8 : ಮಹಾತ್ಮ ಗಾಂಧಿ ಬಗ್ಗೆ ಅವಹೇಳನಕಾರಿ ಭಾಷಣ ಹಾಗೂ ನಾಥೂರಾಮ್ ಗೋಡ್ಸೆ ಅವರನ್ನು ಹೊಗಳಿ ಭಾಷಣ ಮಾಡಿದ್ದಕ್ಕೆ ಬಂಧಿತರಾಗಿದ್ದ ಕಾಳಿಚರಣ್ ಮಹಾರಾಜ್ ಗೆ ಕಾಳಿಚರಣ್ ಪುಣೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನೀಡಿರುವುದಾಗಿ ತಿಳಿದುಬಂದಿದೆ
ಮಹಾತ್ಮ ಗಾಂಧಿ ಅವಹೇಳನಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಸಾಕ್ಷಿ ಮಹಾರಾಜ್ರನ್ನು ಬಿಡುಗಡೆಗೊಳಿಸುವಂತೆ ಹಲವು ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪ್ರಕರಣದಲ್ಲಿ ಏಕಮುಖವಾಗಿ ತನಿಖೆ ನಡೆಸಲಾಗಿದೆ, ಹಿಂದೂ ಸಮುದಾಯವನ್ನು ಪ್ರಚೋದಿಸಲು ಕಾಳಿಚರಣ್ ಮಹಾರಾಜ್ರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ತಕ್ಷಣವೇ ರಾಷ್ಟ್ರಪತಿ ಮಧ್ಯಪ್ರವೇಶಿಸಬೇಕೆಂದು ಹಿಂದುತ್ವವಾದಿಗಳು ಆಗ್ರಹಿಸಿದ್ದರು.
ರಾಯಪುರದಲ್ಲಿ ನಡೆದ ಧರ್ಮ ಸಂಸದ್ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದ ಕಾಳಿ ಚರಣ್ ಮಹಾರಾಜ್ ಮಹಾತ್ಮ ಗಾಂಧೀಜಿ ಅವರನ್ನು ಟೀಕೆ ಮಾಡಿದ್ದಲ್ಲದೆ, ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ಸಮರ್ಥಿಸಿ ವಿವಾದ ಸೃಷ್ಟಿಸಿದ್ದರು.
ಈ ಪ್ರಕರಣದ ವಾದ-ಪ್ರತಿವಾದಗಳನ್ನು ಆಲಿಸಿ, ನೀಡಲಾದ ದಾಖಲೆಗಳನ್ನು ಪರಿಶೀಲಿಸಿದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಕೋರ್ಟ್ ನ್ಯಾಯಾಧೀಶ ಎಂ.ಎ.ಶೇಖ್, ಕಾಳಿ ಚರಣ್ರನ್ನು ನ್ಯಾಯಾಂಗ ಬಂಧನದಲ್ಲಿ ಇಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನಷ್ಟು ಆಳವಾದ ತನಿಖೆಗಳು ಆಗುವ ಅಗತ್ಯವಿದೆ. ಅಲ್ಲಿಯವರೆಗೂ ಆರೋಪಿಯನ್ನು ಜೈಲಿನಲ್ಲಿ ಇರಿಸಬೇಕಾದ ಅಗತ್ಯ ಕಾಣುತ್ತಿಲ್ಲ. ಅವರಿಗೆ ಷರತ್ತುಬದ್ಧ ಜಾಮೀನು ನೀಡಬಹುದು ಎಂದು ತೀರ್ಪು ನೀಡಿದ್ದಾರೆ. 25 ಸಾವಿರ ರೂ.ಶ್ಯೂರಿಟಿ ಬಾಂಡ್, ತನಿಖೆಗೆ ಸಹಕರಿಸಬೇಕು, ತಿಂಗಳಿಗೊಮ್ಮೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಭೇಟಿ ನೀಡಬೇಕು ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಿ ಕಾಳಿ ಚರಣ್ರಿಗೆ ಜಾಮೀನು ನೀಡಿದ್ದಾರೆ.