ರಾಜ್ಯ ಸಭೆಯಲ್ಲಿ ಅಂಗೀಕಾರಗೊಂಡಿರುವ ಕೃಷಿ ಮಸೂದೆ ಮಂಡನೆ ವಿರೋಧಿಸಿ ಹೋರಾಟ ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿರುವ ವಿರೋಧ ಪಕ್ಷದ ನಾಯಕರು, ಇಂದು ರಾಷ್ಟ್ರಪತಿಗಳನ್ನು ಭೇಟಿಯಾಗಲು ತೀರ್ಮಾನಿಸಲಿದ್ದಾರೆ.
ಸಂಸತ್ ಕಲಾಪದಲ್ಲಿ ಕೋಲಾಹಲ ಸೃಷ್ಟಿಸಿದ ಕಾರಣದಿಂದ ಒಂದು ವಾರಗಳ ಕಾಲ ಕಲಾಪದಿಂದ ಅಮಾನತುಗೊಂಡಿರುವ 8 ಸಂಸದರು ತಮ್ಮ ಅಮಾನತನ್ನು ವಿರೋಧಿಸಿ ಸಂಸತ್ ಭವನದ ಬಳಿ ಆಹೋರಾತ್ರಿ ಧರಣಿ ನಡೆಸಿದ್ದರು.
ಈ ನಡುವೆ ಕೃಷಿ ಮಸೂದೆ ಮಂಡನೆ ವಿಷಯ ಕುರಿತು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ನೇತೃತ್ವದಲ್ಲಿ ಸಂಜೆ 5 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಲಿದ್ದಾರೆ.