ಕೃಷಿ ಸಚಿವ ಕೊರೋನಾಗೆ ಬಲಿ

ಚೆನ್ನೈ, . 1: ಕೊರೊನಾ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ, ತಮಿಳುನಾಡು ಕೃಷಿ ಸಚಿವ ಆರ್. ದೊರೈಕಣ್ಣು ನಿನ್ನೆ ಮಧ್ಯರಾತ್ರಿ ಸಾವನ್ನಪ್ಪಿದ್ದಾರೆ.

೭೨ ವರ್ಷದ ಇಳಿ ವಯಸ್ಸಿನ ದೊರೈ ಕಣ್ಣು ಅ. ೧೩ರಂದು ತೀವ್ರ ಉಸಿರಾಟದ ತೊಂದರೆಯಿAದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದು, ತಪಾಸಣೆ ವೇಳೆಯಲ್ಲಿ ಅವರಿಗೆ ಕೊರೊನಾ ದೃಢಪಟ್ಟಿತ್ತು. ವಿಲ್ಲೂಪುರಂ ಸರ್ಕಾರಿ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯ ತೀರಾ ಹದಗೆಟ್ಟಿದ್ದರಿಂದ ಕಾವೇರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.

ಕಾವೇರಿ ಆಸ್ಪತ್ರೆಯ ಕಾರ್ಯಕಾರಿ ನಿರ್ದೇಶಕ ಅರವಿಂದನ್ ಸೆಲ್ವರಾಜ್, ತಮಿಳುನಾಡಿನ ಕೃಷಿ ಸಚಿವರ ಸಾವಿನ ಸುದ್ದಿಯನ್ನು ಖಚಿತಪಡಿಸಿದ್ದಾರೆ.

Exit mobile version