ಕೇರಳ: ಕೇರಳದ ಪದ್ಮನಾಭಸ್ವಾಮಿ ದೇವಾಲಯದ 10 ಮಂದಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಅ.15ರ ವರೆಗೆ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ಅನುಮತಿ ನಿಷೇಧಿಸಲು ದೇವಸ್ಥಾನದ ಆಡಳಿತ ಮಂಡಳಿ ತೀರ್ಮಾನಿಸಿದೆ.
ದೇವಾಲಯದ ಇಬ್ಬರು ಮುಖ್ಯ ಅರ್ಚಕರು ಸೇರಿದಂತೆ 8 ಸಹಾಯಕ ಅರ್ಚಕರಿಗೆ ಹಾಗೂ ಇಬ್ಬರು ಕಾವಲುಗಾರರಿಗೆ ಕೊರೊನಾ ತಗುಲಿದೆ. ಹೀಗಾಗಿ ದೇವಸ್ಥಾನದ ತಂತ್ರಿಗಳು ಪ್ರತಿನಿತ್ಯದ ಪೂಜೆ ನೆರವೇರಿಸಲಿದ್ದಾರೆ. ಆದರೆ ಭಕ್ತಾಧಿಗಳ ಹಿತದೃಷ್ಟಿಯಿಂದ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ ಎಂದು ಪದ್ಮನಾಭಸ್ವಾಮಿ ದೇವಾಲಯದ ಕಾರ್ಯಕಾರಿ ಅಧಿಕಾರಿ ರಥೀಶನ್ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.