ಕೇರಳದ ಪದ್ಮನಾಭ ದೇವಸ್ಥಾನದ 10 ಅರ್ಚಕರಿಗೆ ಕೊರೊನಾ


ಕೇರಳ: ಕೇರಳದ ಪದ್ಮನಾಭಸ್ವಾಮಿ ದೇವಾಲಯದ 10 ಮಂದಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಅ.15ರ ವರೆಗೆ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ಅನುಮತಿ ನಿಷೇಧಿಸಲು ದೇವಸ್ಥಾನದ ಆಡಳಿತ ಮಂಡಳಿ ತೀರ್ಮಾನಿಸಿದೆ.
ದೇವಾಲಯದ ಇಬ್ಬರು ಮುಖ್ಯ ಅರ್ಚಕರು ಸೇರಿದಂತೆ 8 ಸಹಾಯಕ ಅರ್ಚಕರಿಗೆ ಹಾಗೂ ಇಬ್ಬರು ಕಾವಲುಗಾರರಿಗೆ ಕೊರೊನಾ ತಗುಲಿದೆ. ಹೀಗಾಗಿ ದೇವಸ್ಥಾನದ ತಂತ್ರಿಗಳು ಪ್ರತಿನಿತ್ಯದ ಪೂಜೆ ನೆರವೇರಿಸಲಿದ್ದಾರೆ. ಆದರೆ ಭಕ್ತಾಧಿಗಳ ಹಿತದೃಷ್ಟಿಯಿಂದ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ ಎಂದು ಪದ್ಮನಾಭಸ್ವಾಮಿ ದೇವಾಲಯದ ಕಾರ್ಯಕಾರಿ ಅಧಿಕಾರಿ ರಥೀಶನ್ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

Exit mobile version