ಕೊಡಗು: ಅ.17ರಂದು ಕಾವೇರಿ ತೀರ್ಥೋದ್ಭವ

ತಲಕಾವೇರಿಯಲ್ಲಿ ನಡೆಯುವ ಕಾವೇರಿ ತೀರ್ಥೋದ್ಭವಕ್ಕೆ ದಿನಾಂಕ ನಿಗದಿಯಾಗಿದ್ದು, ಅಕ್ಟೋಬರ್ 17.ರಂದು ಬೆಳಗ್ಗೆ 7.03 ಗಂಟೆಗೆ ಕಾವೇರಿ ತೀರ್ಥೋದ್ಭವ ನಡೆಯಲಿದೆ.

ತೀರ್ಥೋದ್ಭವದ ಹಿನ್ನೆಲೆಯಲ್ಲಿ ಸೆ.26ರಂದು ಬೆಳಗ್ಗೆ 8.31ಕ್ಕೆ ಸಲ್ಲುವ ತುಲಾಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವ ಕಾರ್ಯ ನಡೆಯಲಿದೆ. ನಂತರ ಅಕ್ಟೋಬರ್ 4ರಂದು ಬೆಳಗ್ಗೆ 10.33 ಗಂಟೆಗೆ ಸಲ್ಲುವ ವೖಶ್ಚಿಕ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅಕ್ಟೋಬರ್ 14 ರಂದು ಬೆಳಗ್ಗೆ 11.45 ಗಂಟೆಗೆ ಸಲ್ಲುವ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು ಹಾಗೂ ಅದೇ ದಿನ ಸಂಜೆ 5.15 ನಿಮಿಷಕ್ಕೆ ಸಲ್ಲುವ ಮೀನಾ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇರಿಸಲಾಗುವುದು.

ನಂತರ ಅಕ್ಟೋಬರ್ 17ರಂದು ಶನಿವಾರ ಬೆಳಗ್ಗೆ 7.03 ನಿಮಿಷಕ್ಕೆ ಸಲ್ಲುವ ಕನ್ಯಾ ಲಗ್ನದಲ್ಲಿ ಶ್ರೀ ಮೂಲಕಾವೇರಿ ತೀರ್ಥೋದ್ಭವದ ಪುಣ್ಯ ಕಾರ್ಯ ನಡೆಯಲಿದೆ ಎಂದು ತಲಕಾವೇರಿ ಭಾಗಮಂಡಲ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಾಹಿತಿ ನೀಡಿದ್ದಾರೆ.

Exit mobile version