ಕೊನೆಗೂ ಇಲಾಖೆ ಮೊದಲ ಸಭೆ ಕರೆದ ಪಶುಸಂಗೋಪನಾ ಸಚಿವರು..!

ಬೆಂಗಳೂರು,ಸೆ.13: ಮಾನ್ಯ ಪಶುಸಂಗೋಪಾನ ಸಚಿವರಾದ ಶ್ರೀ ಪ್ರಭು ಚೌಹಾಣ್ ಅಧಿಕಾರ ವಹಿಸಿಕೊಂಡ ನಂತರ ಇಂದು ಮೊದಲ ಬಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು.

ಅತ್ಯಂತ ಹಳೆಯ ಇಲಾಖೆಯಲ್ಲಿ ಒಂದಾದ ಪಶು ಸಂಗೋಪನೆ ಇಲಾಖೆಗೆ ನಾನು ಕಾರ್ಯ ನಿರ್ವಹಿಸುತ್ತಿರುವುದು ನನಗೆ ಅತ್ಯಂತ ಖುಷಿ ತಂದ ವಿಷಯವಾಗಿದೆ.ಹಂತ ಹಂತವಾಗಿ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡುತ್ತೇನೆ. ಜಿಲ್ಲೆಗಳಲ್ಲಿ ಇಲಾಖೆಯಿಂದ ಅನುಷ್ಠಾನವಾದ ಪ್ರತಿಯೊಂದು ಯೋಜನೆಯ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಈ ಸಂಧರ್ಭದಲ್ಲಿ ಹೇಳಿದರು.ಇಲಾಖೆಯ ಪ್ರಗತಿ ಪರಿಶೀಲನೆಯಲ್ಲಿ ಭಾಗಿಯಾದ ನಿಮ್ಮಲ್ಲಿ ಬಹುತೇಕರು ಹಿರಿಯರಿದ್ದೀರಿ ನಿಮ್ಮ ಅನುಭವ ಇಲಾಖೆ ಮತ್ತು ಜನರಿಗೆ ಅನುಕೂಲವಾಗಲಿ ಎಂದು ಹೇಳಿದರು.

ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ವಿ ರಶ್ಮಿ ಮಹೇಶ್ ಹಾಗೂ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Exit mobile version