ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸೇರಿ ಹಲವರ ಬಂಧನ, ಬಿಡುಗಡೆ

ಮುಂಬೈ, ಡಿ. 23: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ, ಗಾಯಕ ಗುರು ರಾಂಧವ ಸೇರಿದಂತೆ ಹಲವು ಸೆಲೆಬ್ರಿಟಿಗಳನ್ನು ಬಂಧಿಸಿದ ಮುಂಬೈ ಪೊಲೀಸರು ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಮುಂಬೈ ವಿಮಾನ ನಿಲ್ದಾಣದ ಸಮೀಪದ ‌ಗ್ರ್ಯಾಗನ್ ಫ್ಲೈ ಕ್ಲಬ್‌ನ ಮೇಲೆ ದಾಳಿ ನಡೆಸಿದ ಮುಂಬೈ ಪೊಲೀಸರು, ಸುರೇಶ್ ರೈನಾ ಸೇರಿದಂತೆ 34 ಮಂದಿಯನ್ನು ಬಂಧಿಸಿದ್ದಾರೆ. ಮಂಗಳವಾರ ಮುಂಜಾನೆ 3 ಗಂಟೆ ವೇಳೆಯಲ್ಲಿ ದಾಳಿ ನಡೆಸಿದ ಪೊಲೀಸರು, ಬಂಧಿತರ ವಿರುದ್ಧ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಸಹರ್ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ, ದಾಳಿಯಲ್ಲಿ ಬಂಧಿಸಲ್ಪಟ್ಟ ಮಾಜಿ ಕ್ರಿಕೆಟಿಗ ಸುರೇಶ್ ರೈನಾ, ಗಾಯಕ ಗುರು ರಾಂಧವ ಸೇರಿದಂತೆ ಇನ್ನಿತರರ ವಿರುದ್ಧ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದ್ದು, ಇವರುಗಳನ್ನು ಜಾಮೀನಿನ ಆಧಾರದ ಮೇಲೆ‌ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Exit mobile version