ಮಂಗಳೂರು, ನ. 06: ಬಿಜೆಪಿ ಕೋರ್ ಕಮಿಟಿ ಸಭೆಯು ಮಂಗಳೂರಿನ ಓಶಿಯನ್ ಪರ್ಲ್ ಹೊಟೇಲ್ ನಲ್ಲಿ ನಡೆದಿದ್ದು, ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ.
ಈ ಕುರಿತು ಮಾತನಾಡಿದ ಅರವಿಂದ ಲಿಂಬಾವಳಿ, ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ. ಅಲ್ಲದೆ ಶಿಕ್ಷಕರ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ವ್ಯಕ್ತಿಗಳಿಗೆ ಗೆಲುವು ಸಿಗಲಿದೆ ಎಂದರು.
ಸಂಘಟನಾತ್ಮಕ ಕಾರ್ಯಗಳ ಯಶಸ್ಸಿಗೆ ಕಾರ್ಯತಂತ್ರ ರೂಪಿಸಲಾಗಿದ್ದು
ಪಂಚಾಯತ್ ಮಟ್ಟದ ಚುನಾವಣೆ ಬಗ್ಗೆ ಚರ್ಚೆ ನಡೆಯಿತು. ಮುಂದಿನ ಪಂಚಾಯತ್ ಚುನಾವಣೆಯನ್ನು ಎದುರಿಸಲು ಬಿಜೆಪಿ ಸನ್ನದ್ಧವಾಗಿದೆ. ಅಲ್ಲದೇ ಈ ಸಭೆಯಲ್ಲಿ ಎರಡು ಮಹತ್ವದ ನಿರ್ಣಯಯಗಳನ್ನು ತೆಗೆದುಕೊಳ್ಳಲಾಗಿದ್ದು ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ತರಲು ಪ್ರಸ್ತಾಪಿಸಲಾಗಿದೆ. ಇನ್ನು ಗೋಹತ್ಯೆ ನಿಷೇಧ ಕಾನೂನಿನ ಬಗ್ಗೆ ಪುನರ್ ವಿಮರ್ಶೆ ಮಾಡಿ ಕಾನೂನು ರೂಪಿಸಲಾಗುವುದು. ಇನ್ನು ರಾಜ್ಯಸಭೆಗೆ ಹತ್ತಾರು ಹೆಸರುಗಳು ಬಂದಿದ್ದು ಪ್ರಮುಖರಾದವರನ್ನು ಆಯ್ಕೆ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.