ಗ್ಯಾಸ್ ಸಿಲಿಂಡರ್ ಸಿಡಿದು ಬೆಂಕಿಗಾಹುತಿಯಾದ ಮನೆ..

ಗ್ಯಾಸ್ ಸಿಲಿಂಡರ್ ಸಿಡಿದು ಸಂಪೂರ್ಣ ಮನೆ ಸುಟ್ಟುಕರಕಲಾದ ಘಟನೆ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ನಡೆದಿದೆ. ಕೃಷ್ಣ ಎಂಬವರ ಮನೆಯಲ್ಲಿ ಗ್ಯಾಸ್ ಸ್ಫೋಟಗೊಂಡಿದ್ದು; ಮನೆಯಲ್ಲಿ ಯಾರೂ ಇಲ್ಲದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ.ಸೋಮವಾರ ಸಂಜೆ ಈ ಘಟನೆ ನಡೆದಿದ್ದು ಸ್ಫೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದೆ.

ಇನ್ನು ಮನೆಯಲ್ಲಿ ಕೃಷ್ಣ ಎಂಬವರ ಪತ್ನಿ ಮತ್ತು ಮಗಳು ಮಾತ್ರ ವಾಸವಿದ್ದರು . ಆದ್ರೆ ಘಟನೆಯ ಸಮಯದಲ್ಲಿ ಅವರಿಬ್ಬರು ಸುಳ್ಯಕ್ಕೆ ಹೋಗಿದ್ದು ಪ್ರಾಣಹಾನಿಯಿಂದ ಪಾರಾಗಿದ್ದಾರೆ.ಮನೆ ಸಂಪೂರ್ಣ ನಾಶವಾಗಿದ್ದು ಮನೆಯ ಎದುರಲ್ಲಿದ್ದ ತೆಂಗಿನಮರದ ತುದಿಯವರೆಗೆ ಬೆಂಕಿಯ ಕೆನ್ನಾಲಿಗೆ ಹತ್ತಿ ತೆಂಗಿನ ಮರಕ್ಕೂ ಬೆಂಕಿ ಹತ್ತಿಕೊಂಡಿದೆ. ಇನ್ನು ಸ್ಥಳಕ್ಕೆ ಸುಳ್ಯ ಅಗ್ನಿಶಾಮಕ ದಳದ ಪ್ರಭಾರ ಠಾಣಾಧಿಕಾರಿ ವಿಶ್ವನಾಥ ಪೂಜಾರಿ ಹಾಗೂ ತಂಡ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ.

Exit mobile version