ಚಿರು ಪುತ್ರನ ತೊಟ್ಟಿಲು ಶಾಸ್ತ್ರ

ಬೆಂಗಳೂರು,ನ.12: ಸ್ಯಾಂಡಲ್‌ವುಡ್‌ನ ಖ್ಯಾತ ನಟ ದಿ.ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ಪುತ್ರನ ತೊಟ್ಟಿಲು ಶಾಸ್ತ್ರ ಅದ್ಧೂರಿಯಾಗಿ ನೆರವೇರಿದೆ. ಚಿರಂಜೀವಿ ಸರ್ಜಾರನ್ನು  ಕಳೆದುಕೊಂಡು ಅತೀವ ದುಃಖದಲ್ಲಿದ್ದ ಸರ್ಜಾ ಕುಟುಂಬಕ್ಕೆ ಚಿರು ಮಗುವಿನ ಆಗಮನ ನೋವನ್ನು ಮರೆಸುವ ಸಂಭ್ರಮದ ಕ್ಷಣವಾಗಿದ್ದು,  ತೊಟ್ಟಿಲು ಶಾಸ್ತ್ರ ಇದೀಗ ನೆರವೇರಿದೆ.

ಇಂದು ಸುಂದರ್ ರಾಜ್ ಹಾಗೂ ಪ್ರಮಿಳಾ ಜೋಷಾಯ್ ನಿವಾಸದಲ್ಲಿ ಶಾಸ್ತ್ರೋಕ್ತವಾಗಿ ಚಿರು ಮೇಘನಾ ಪುತ್ರನ ತೊಟ್ಟಿಲು ಶಾಸ್ತ್ರ ನೆರವೇರಿದ್ದು, ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು. ಇನ್ನು ಮಗುವಿಗಾಗಿ ಗದಗದ ಮಹಿಳಾ ಸಂಘದ ವತಿಯಿಂದ ಬಣ್ಣ ಬಣ್ಣದ ಚಿತ್ತಾರನ್ನು ನೇಯ್ದ  ವಿಶೇಷವಾದ ಹ್ಯಾಂಡ್ ಮೇಡ್ ತೊಟ್ಟಿಲು ನೀಡಲಾಗಿದ್ದು, ಅಭಿಮಾನಿಗಳು ನೀಡಿರುವ ಈ ತೊಟ್ಟಿಲಿನಲ್ಲಿಯೇ ತೊಟ್ಟಿಲು ಶಾಸ್ತ್ರ ನೆರವೇರಿಸಲಾಗಿದೆ.

Exit mobile version