ಜೆಎನ್‌ಯು ವಿವಿಯಲ್ಲಿ ಸ್ವಾಮಿ ವಿವೇಕಾನಂದ ಪ್ರತಿಮೆಯ ಅನಾವರಣ

ನವದೆಹಲಿ, . 9: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ೧೨ರಂದು ಜೆಎನ್‍ಯು ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಲಾಗಿರುವ ಸ್ವಾಮಿ ವಿವೇಕಾನಂದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ಜೆಎನ್‍ಯು ವಿಶ್ವ ವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಅದನ್ನು ನ.12ರಂದು ಸಂಜೆ 6 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ ಎಂದು ವಿವಿ ಉಪಕುಲಪತಿ ಎಂ.ಜಗದೀಶ್‍ಕುಮಾರ್ ತಿಳಿಸಿದ್ದಾರೆ.

ಪ್ರಧಾನಿಯವರು ಇತ್ತೀಚೆಗೆ ಶೈಕ್ಷಣಿಕ ಸಮಾವೇಶಗಳಲ್ಲಿ ಭಾಗವಹಿಸುತ್ತಿದ್ದು, ನ.7ರಂದು ದೆಹಲಿ ಐಐಟಿಯ 51ನೇ ಘಟಿಕೋತ್ಸವದಲ್ಲಿ ಭಾಗವಹಿಸಿದ್ದರು. ಇದಕ್ಕೂ ಮೊದಲು ಸೆಪ್ಟೆಂಬರ್‍ನಲ್ಲಿ ಇಂಧೋರ್‍ನ ಐಐಟಿಯ ಘಟಿಕೋತ್ಸವವನ್ನು ಉದ್ದೇಶಿಸಿ ಆನ್‍ಲೈನ್‍ನಲ್ಲಿ ಮಾತನಾಡಿದ್ದರು.

Exit mobile version