ಡಾ. ವಿಷ್ಣುವರ್ಧನ್ ಪ್ರತಿಮೆ ಧ್ವಂಸ ವಿವಾದ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದು ಹೀಗೆ…

ಬೆಂಗಳೂರು, ಡಿ. 27: ಕನ್ನಡ ಚಿತ್ರರಂಗದ ಮೇರು‌ನಟ ಸಾಹಸ ಸಿಂಹ ಡಾ.‌ ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲಿ ಎಂದಿದ್ದಾರೆ.

ಈ ಬಗ್ಗೆ ತಮ್ಮ ಟ್ವಿಟರ್ ಹಾಗೂ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿರುವ ನಟ ದರ್ಶನ್, ಕರ್ನಾಟಕದಲ್ಲಿ ಅತಿಯಾಗಿ ಪ್ರೀತಿಸೋ, ಆರಾಧಿಸೋ ವ್ಯಕ್ತಿಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ನಮ್ಮ ನಲ್ಮೆಯ ಸಾಹಸ ಸಿಂಹ ಡಾ|| ವಿಷ್ಣು ಸರ್ ಪುತ್ಥಳಿಯನ್ನು ಯಾರೋ ಕಿಡಿಗೇಡಿಗಳು ಯಾರು ಇಲ್ಲದ ಹೊತ್ತಿನಲ್ಲಿ ಧ್ವಂಸ ಮಾಡಿರುವುದು ನಾಚಿಕೆಯ ಸಂಗತಿ. ಇಂತ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು ಎಂದಿದ್ದಾರೆ.

Exit mobile version