ಡಿಸಿ ವರ್ಗಾವಣೆ ವಿವಾದ: ಅರ್ಜಿ ವಿಚಾರಣೆ ಮುಂದೂಡಿಕೆ

ಹಿಂದಿನ ಡಿಸಿ ಬಿ.ಶರತ್ ಹಾಗೂ ಹಾಲಿ ಡಿಸಿ ರೋಹಿಣಿ ಸಿಂಧೂರಿ

ಮೈಸೂರು, ಅ.14: ನಾಡಹಬ್ಬದ ದಸರಾ ಮಹೋತ್ಸವ ಸಂದರ್ಭದಲ್ಲೇ ಜಿಲ್ಲಾಧಿಕಾರಿಗಳ ವರ್ಗಾವಣೆ ವಿವಾದ ಮುಂದುವರೆದಿದ್ದು, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಎರಡು ದಿನದ ಮಟ್ಟಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ.


ಹಿಂದಿನ ಜಿಲ್ಲಾಧಿಕಾರಿ ಬಿ.ಶರತ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸುತ್ತಿರುವ ಸಿಎಟಿ, ಬುಧವಾರ ವಿಚಾರಣೆ ನಡೆಸಿ ಶುಕ್ರವಾರಕ್ಕೆ ಮುಂದೂಡಿತು. ತಿಂಗಳು ಕಳೆಯುವ ಮುನ್ನ ಬಿ.ಶರತ್ ಅವರನ್ನು ವರ್ಗಾವಣೆ ಮಾಡಿ ರೋಹಿಣಿ ಸಿಂಧೂರಿ ಅವರನ್ನು ನೇಮಿಸಿತ್ತು.ಇದನ್ನು ಪ್ರಶ್ನಿಸಿ ಸಿಎಟಿ ಮೊರೆ ಹೋಗಿದ್ದರು. 7ರಂದು ವಿಚಾರಣೆ ಆರಂಭಿಸಿದ ನ್ಯಾಯಾಧೀಶರು 14ಕ್ಕೆ ಮುಂದೂಡಿತ್ತು. ಬುಧವಾರ ವಿಚಾರಣೆ ಕೈಗೆತ್ತಿಕೊಂಡು ಕೊರೊನಾ ಹಿನ್ನೆಲೆಯಲ್ಲಿ ಆನ್‍ಲೈನ್ ಮೂಲಕವೇ ಅರ್ಜಿ ವಿಚಾರಣೆ ನಡೆಸಲಾಯಿತು.

ಆದರೆ ಈ ವೇಳೆ ತಾಂತ್ರಿಕ ಸಮಸ್ಯೆ ಎದುರಾಗಿ ಹೇಳಿಕೆಗಳು ಸ್ಪಷ್ಟವಾಗಿ ಕೇಳಿಸದ ಹಿನ್ನಲೆ ವಿಚಾರಣೆಯನ್ನು ಅ.16ಕ್ಕೆ ಮುಂದೂಡಿಕೆಯಾಯಿತು. ಜತೆಗೆ ವಾದಿ ಹಾಗೂ ಪ್ರತಿವಾದಿಗಳ ಕಡೆಯ ವಕೀಲರಿಗೆ ಖುದ್ದು ಅಂದು ನ್ಯಾಯಾಲಯದಲ್ಲಿ ಹಾಜರಿರುವಂತೆ ಕೋರ್ಟ್ ಸೂಚನೆ ನೀಡಿತು.

Exit mobile version