ತುಮಕೂರು, ನ. 10: ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಆದರೆ ಇಲ್ಲೊಬ್ಬ ಪಕ್ಷೇತರ ಅಭ್ಯರ್ಥಿ ಮತ ಎಣಿಕೆ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ತಮ್ಮನ್ನು ಮತ ಎಣಿಕೆ ಕೇಂದ್ರಕ್ಕೆ ಬಿಡುತ್ತಿಲ್ಲ ಎಂಬ ಆರೋಪದಡಿಯಲ್ಲಿ ತುಮಕೂರು ನಗರದ ಪಾಲಿಟೆಕ್ನಕ್ ಕಾಲೇಜಿನಲ್ಲಿ ಮತ ಎಣಿಕೆ ಕೇಂದ್ರದ ಮುಂದೆ ಪಕ್ಷೇತರ ಅಭ್ಯರ್ಥಿ ಆಂಬ್ರೋಸ್ ಡಿ. ಮೆಲ್ಲೊ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಆಗಮಿಸಿದ ಡಿವೈಎಸ್ಪಿ ತಿಪ್ಪೇಸ್ವಾಮಿ ಅವರು ಪಕ್ಷೇತರ ಅಭ್ಯರ್ಥಿಯನ್ನು ಮತ ಕೇಂದ್ರಕ್ಕೆ ಕಳುಹಿಸಿಕೊಟ್ಟರು. ಇದರಿಂದಾಗಿ ಪರಿಸ್ಥಿತಿ ತಿಳಿಗೊಂಡಿತು.