ಮೈಸೂರು, ಅ.16: ಪ್ರತಿವರ್ಷದಂತೆ ಮೈಸೂರು ದಸರಾವು ನಾಳೆಯಿಂದ ಆರಂಭವಾಗಲಿದ್ದು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮೈಸೂರು ದಸರಾದಲ್ಲಿ ಭಾಗಿಯಾಗುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿಸಿದ್ದಾರೆ.
ದಸರಾವನ್ನು ಸರಳವಾಗಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರದಂತೆ ಆಚರಿಸಬೇಕೆಂಬ ಸೂಚನೆ ಇರುವ ಹಿನ್ನೆಲೆಯಲ್ಲಿ ದಸರಾದಲ್ಲಿ ಭಾಗಿಯಾಗುವ ಸಚಿವರು ಸೇರಿದಂತೆ ಎಲ್ಲರೂ ಕೊರೊನಾ ಪರೀಕ್ಷೆ ಮಾಡಿಸಬೇಕು ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್ ಹೇಳಿದರು.
ಇಂದು ಮೈಸೂರಿಗೆ ಆಗಮಿಸುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೋವಿಡ್ ಹಾಗೂ ದಸರಾ ಕುರಿತಂತೆ ಚರ್ಚೆ ನಡೆಸಲಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಮೂರ್ನಾಲ್ಕು ಸಚಿವರು ಮಾತ್ರ ಸದ್ಯ ಉದ್ಘಾಟನೆಗೆ ಬರಲಿದ್ದಾರೆ ಎಂಬ ಮಾಹಿತಿ ಇದೆ ಎಂದರು.