ಮೈಸೂರು, 27: ನಾಡಹಬ್ಬ ದಸರಾ ಯಶಸ್ಸಿಗಾಗಿ ಹರಕೆ ಹೊತ್ತಿದ್ದ ಡಿಸಿ ರೋಹಿಣಿ ಸಿಂಧೂರಿ, ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಕುಟುಂಬ ಸಮೇತವಾಗಿ ಆಗಮಿಸಿ ಹರಕೆ ತೀರಿಸಿದ್ದಾರೆ.
ಮೈಸೂರಿನ ಪ್ರಸಕ್ತ ಡಿಸಿ ರೋಹಿಣಿ ಸಿಂಧೂರಿ ತಂದೆ, ತಾಯಿ, ಪತಿ ಹಾಗೂ ಮಗುವಿನೊಂದಿಗೆ ಆಗಮಿಸಿ, ಚಾಮುಂಡಿಯ ಪಲ್ಲಕ್ಕಿ ರಥ ಎಳೆದು ಹರಕೆ ತೀರಿಸಿದ್ಧಾರೆ.
ದಸರಾ ಹೊತ್ತಿನಲ್ಲೇ ಮೈಸೂರಿಗೆ ಆಗಮಿಸಿದ್ದ ಅವರು ದಸರಾ ಸುಸೂತ್ರವಾಗಿ ನಡೆಯುವಂತೆ ಆಶಿಸಿ ಹರಕೆ ಹೊತ್ತು 9 ದಿನವೂ ಪಲ್ಲಕ್ಕಿ ರಥ ಎಳೆದಿದ್ದಾರೆ ಎಂದು ಎನ್ನಲಾಗಿದೆ. ಅದಲ್ಲದೇ ನಿನ್ನೆ ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಸಂಜೆ ಬೆಟ್ಟಕ್ಕೆ ತೆರಳಿದ ರೋಹಿಣಿ ಕುಟುಂಬ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಹರಕೆ ತೀರಿಸಿದ್ಧಾರೆ.