ಬೆಂಗಳೂರು, ನ. 06: ರಾಜ್ಯ ಸರ್ಕಾರವು ನೂತನ ಆದೇಶವನ್ನು ಹೊರಡಿಸಿದೆ. ಅನೇಕ ರಾಜ್ಯಗಳಲ್ಲಿ ಈಗಾಗಲೇ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಅದೇ ಕರ್ನಾಟಕ ರಾಜ್ಯದಲ್ಲೂ ದೀಪಾವಳಿಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ತಜ್ಞ ವೈದ್ಯರು ಪಟಾಕಿಯಿಂದ ಕರೊನಾ ರೋಗಿಗಳಿಗೆ ತೊಂದರೆಯಾಗುತ್ತದೆ ಹಾಗೂ ಸೋಂಕಿನ ಪ್ರಮಾಣ ಅಧಿಕವಾಗುತ್ತದೆ ಎಂಬ ವರದಿ ಯನ್ನು ಮಾಡಿದ್ದರು. ಈ ಹಿನ್ನಲೆಯಲ್ಲಿ ಈಗಾಗಲೇ ದೆಹಲಿ, ಪಶ್ಚಿಮಬಂಗಾಳ ರಾಜ್ಯಗಳು ದೀಪಾವಳಿಗೆ ಪಟಾಕಿಯನ್ನು ನಿಷೇಧಿಸಿವೆ. ಇದೀಗ ರಾಜ್ಯ ಸರ್ಕಾರವೂ ಅದೇ ನಿರ್ಧಾರ ಕೈಗೊಂಡಿದೆ.
ದೀಪಾವಳಿಗೆ ರಾಜ್ಯದಲ್ಲಿ ಎಲ್ಲಿಯೂ ಪಟಾಕಿ ಹೊಡೆಯಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಆದೇಶ ಹೊರಡಿಸಿದ್ದು, ಶೀಘ್ರದಲ್ಲೇ ನೋಟಿಫಿಕೇಶನ್ ಹೊರಡಿಸುವುದಾಗಿ ತಿಳಿಸಿದ್ದಾರೆ.