ನವದೆಹಲಿ, ಅ. 20: ಕಳೆದೊಂದು ವಾರದ ಮಳೆಯಿಂದಾಗಿ ತೆಲಂಗಾಣ ತತ್ತರಿಸಿ ಹೋಗಿದೆ. ಇಲ್ಲಿನ ಪರಿಹಾರ ಕಾರ್ಯಗಳಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 15 ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ಮಂಗಳವಾರ ಘೋಷಿಸಿದ್ದಾರೆ.
ಈ ಕುರಿತು ಹೈದರಾಬಾದ್ನಲ್ಲಿ ಪ್ರವಾಹ ಪರಿಸ್ಥಿತಿ ವಿಕೋಪಕ್ಕೆ ತುತ್ತಾಗಿದೆ. ಈ ಸಂಕಷ್ಟದ ಸಮಯದಲ್ಲಿ ದೆಹಲಿಯ ಜನರು ಹೈದರಾಬಾದ್ನ ಬೆಂಬಲಕ್ಕೆ ನಿಂತಿದ್ದಾರೆ. ದೆಹಲಿ ಸರ್ಕಾರ ಪರಿಹಾರ ಕಾರ್ಯಗಳಿಗಾಗಿ 15 ಕೋಟಿ ರೂಪಾಯಿಗಳನ್ನು ತೆಲಂಗಾಣ ಸರ್ಕಾರಕ್ಕೆ ನೀಡಲಿದೆ’ ಎಂದು ಟ್ವೀಟ್ ಮಾಡಿದ್ದಾರೆ.
ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಸುರಿದ ಮಳೆಗೆ 70 ಮಂದಿ ಬಲಿಯಾಗಿದ್ದಾರೆ. ತಗ್ಗು ಪ್ರದೇಶಗಳಿಂದ ಸುಮಾರು 37,000 ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಬೇಕಾಯಿತು ಎಂದು ಸಚಿವರು ತಿಳಿಸಿದರು.