ಉಡುಪಿ, ಡಿ. 13: ವಿದ್ವಾಂಸ, ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯ (84) ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಉಡುಪಿಯ ಅಂಬಲಾವಾಡಿ ಸ್ವಗೃಹದಲ್ಲಿ ಇಂದು ನಿಧನರಾದರು.
ಬನ್ನಂಜೆ ಅವರು ಪ್ರವಚನಗಳ ಮೂಲಕ ತತ್ವ ಪ್ರಚಾರ ಮಾಡುತ್ತಿದ್ದರು. ಮಾಧ್ವ ತತ್ವದಲ್ಲಿ ಅಪಾರ ಪಾಂಡಿತ್ಯ ಸಾಧಿಸಿದ್ದರು. ಕನ್ನಡ ಮತ್ತು ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನೂ ರಚಿಸಿದ್ದಾರೆ.