ಬಸವರಾಜ ಬೊಮ್ಮಾಯಿ ಕರ್ನಾಟಕದ ನೂತನ ಮುಖ್ಯಮಂತ್ರಿ: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದ್ದು, ಆ ಮೂಲಕ ಕಳೆದ ಹಲವು ದಿನಗಳಿಂದ ಯಾರಾಕ್ತಾರೆ ರಾಜ್ಯದ ಮುಂದಿನ ಸಿಎಂ ಎನ್ನುವ ಚರ್ಚೆಗೆ ತೆರೆ ಬಿದ್ದಂತಾಗಿದೆ.

ವಯಸ್ಸಿನ ಕಾರಣವನ್ನು ಮುಂದಿಟ್ಟುಕೊಂಡು ಬಿ.ಎಸ್. ಯಡಿಯೂರಪ್ಪ ಅವರಿಂದ ಪಕ್ಷ ರಾಜೀನಾಮೆ ಪಡೆದಿತ್ತು. ಈ ಹಿನ್ನೆಲೆಯಲ್ಲಿ ಜುಲೈ 26ರಂದು ಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ರಾಜ್ಯದ ಮುಂದಿನ ಸಿಎಂ ಯಾರಾಗ್ತಾರೆ ಎನ್ನುವ ಚರ್ಚೆಗಳು ನಡೆದಿತ್ತು.

ಇದೀಗ ಈ ಎಲ್ಲಾ ಗೊಂದಲಕ್ಕೆ ತೆರೆಬಿದ್ದಿದ್ದು ಕಡೇ ಗಳಿಗೆಯಲ್ಲಿ ಬಸವರಾಜ್ ಬೊಮ್ಮಾಯಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ್ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಪಕ್ಷದ
ಶಾಸಕಾಂಗ ಸಭೆಯಲ್ಲಿ ಯಡಿಯೂರಪ್ಪವರು ಬಸವರಾಜ್ ಬೊಮ್ಮಾಯಿ ಅವರ ಹೆಸರು ಪ್ರಸ್ತಾಪಿಸಿದರು.

ನೂತನ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿರುವ ಬಸವರಾಜ ಬೊಮ್ಮಾಯಿ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Exit mobile version