ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಜಿ.ಟಿ ದೇವೇಗೌಡ ಅವರು ಬುಧವಾರ ಬೆಳಗ್ಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ನಂತರ ಮಾತನಾಡಿದ ಜಿ.ಟಿ ದೇವೇಗೌಡ, ನಾನು ಮತ್ತು ಡಿಕೆಶಿ ಬಹಳ ವರ್ಷಗಳಿಂದ ಸ್ನೇಹಿತರು. ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನಿಸಿದ್ದವರು ನಾವು. ಬಾಂಬೆಗೂ ಕೂಡ ಜೊತೆಗೆ ತೆರಳಿದ್ದೆವು.
ಇತ್ತೀಚಿಗೆ ಡಿಕೆಶಿ ಕುಟುಂಬ ಮತ್ತು ಸ್ನೇಹಿತರ ಮನೆ ಕಚೇರಿ ಸೇರಿ ಒಟ್ಟು 14 ಸಿಬಿಐ ರೈಡ್ ಆಗಿತ್ತು ಆದರೇ ಚುನಾವಣೆ ಸಮಯದಲ್ಲಿ ರೈಡ್ ಮಾಡಬಾರದಿತ್ತು. ಅದಾಗ್ಯೂ ಸಿಬಿಐ ದಾಳಿ ನಡೆದಿರುವುದು ತಪ್ಪು. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.
ನನಗೂ ಬಿಜೆಪಿಯಿಂದ ಡಿಸಿಎಂ ಆಫರ್ ಬಂದಿತ್ತು. ಆದರೆ ನಾವು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ವಿ, ಐದು ವರ್ಷ ಅವರೇ ಸಿಎಂ ಆಗುತ್ತಾರೆ ಎಂದು ಬಯಸಿದ್ದೆವು. ನಾವೇ ಕುಮಾರಸ್ವಾಮಿಯನ್ನು ಸಿಎಂ ಮಾಡಿ, ನಾವೇ ಇಳಿಸೋಕೆ ಆಗುತ್ತಾ? ಎಂದರು.