ಬಿಜೆಪಿ ನೋಟಿಸ್‍ಗೆ ಡೋಂಟ್‍ ಕೇರ್: ವಿಪಕ್ಷ ನಾಯಕ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ವಿರುದ್ಧ ಮಾಡಿರುವ ಆರೋಪಕ್ಕೆ ನೋಟಿಸ್ ನೀಡಿರುವುದಕ್ಕೆ ನಾನು ಹೆದರುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಆರೋಪಕ್ಕೆ ನೋಟಿಸ್ ನೀಡಿದ ವಿಚಾರದ ಬಗ್ಗೆ ಕಿಡಿಕಾರಿದರು. ನೋಟಿಸ್ ಬಂಡವಾಳ ಏನು ನನಗೆ ಗೊತ್ತಿಲ್ವಾ? ನಾನು ಲಾಯರ್ ತಾನೆ ನೋಟಿಸ್ ಬಗ್ಗೆ ನನಗೆ ಗೊತ್ತಿಲ್ವಾ? ನಾನೇನು ನೋಟಿಸ್‌ಗೆ ಹೆದರಿಕೊಳ್ತಿನಾ? ನಾನು ಆರೋಪ ಮಾಡಿರೋದು ಸರ್ಕಾರದ ಮೇಲೆ. ಅವನ್ಯಾರೋ ನೋಟಿಸ್ ಕೊಟ್ಟಿದ್ದಾನೆ. ಯಾರೋ ನೋಟಿಸ್ ಕೊಟ್ಟರೆ ಏನ್ ಪ್ರಯೋಜನ ಎಂದು ಟೀಕಿಸಿದರು.

ಹೂಬ್ಲೋಟ್ ವಾಚ್‍ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಹೂಬ್ಲೋಟ್ ವಾಚ್ ವಿವಾದ‌, ಅದು ಮುಗಿದು ಹೋದ ಕಥೆ ಮತ್ಯಾಕೆ ಅದು?. ನಾನು ಯಡಿಯೂರಪ್ಪರ ಹಳೆ ಕೇಸ್ ಬಗ್ಗೆ ಮಾತಾಡ್ಲಾ.? ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು. ವಾಚ್ ವಿಚಾರ ಮುಗಿದು ಹೋಗಿದೆ.ನಾನು ಸರ್ಕಾರಕ್ಕೆ ಆ ವಾಚ್ ವಾಪಸ್ಸು ಕೊಟ್ಟಿದ್ದೇನೆ. ಎಸಿಬಿ ತನಿಖೆ ಆಗಿ ಕ್ಲೀನ್ ಚಿಟ್ ಸಿಕ್ಕಿದೆ. ನಾನೇನು ವಾಚ್ ಸರ್ಕಾರದ ದುಡ್ಡಿನಿಂದ ತೆಗೆದುಕೊಂಡಿದ್ನಾ. ಸರ್ಕಾರದಿಂದ ಲೂಟಿ ಮಾಡಿದ ದುಡ್ದಿನಿಂದ ವಾಚ್ ಖರೀದಿಸಿದ್ನಾ. ಅದನ್ನ ಯಾರೋ ಕೊಟ್ಟಿದ್ರು ಅದಕ್ಕೆ ಅವರು ಅಫಿಡೇವಿಟ್ ಕೊಟ್ಟಿದ್ದಾರೆ. ಈಗ ಅದನ್ನ ಮತ್ಯಾಕೆ ತೆಗಿದಿದ್ದಾರೆ. ಇದು ಜನರನ್ನ ದಾರಿ ತಪ್ಪಿಸುವ ಕೆಲಸವಾಗಿದ್ದು, ಈ ಬಗ್ಗೆ ಮಾತನಾಡುವುದಿಲ್ಲ ಎಂದರು.
ಜೈಲಿಗೆ ಹೋಗಿ ಬಂದ ಡಿಕೆಶಿ ಪಕ್ಕದಲ್ಲಿ ಸಿದ್ದರಾಮಯ್ಯ ಕುಳಿತಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಇವರಿಗೇನು ಬಹಾಳ ನೈತಿಕ ಇದೆಯೇ? ನಾನೀಗ ಅದರ ಬಗ್ಗೆ ಮಾತನಾಡೋಲ್ಲ. ಡಿಕೆಶಿ ತಪ್ಪಿತಸ್ಥ ಅಂತ ತೀರ್ಮಾನ ಆಗಿದ್ಯಾ?. ಅದು ರಾಜಕೀಯ ದುರುದ್ದೇಶದಿಂದ ಹಾಕಿರುವ ಕೇಸ್. ಅವರುಗೆ ಜಾಮೀನು ಕೊಟ್ಟಿದ್ದಾರೆ. ಆ ಬಗ್ಗೆ ನಾನು ಮಾತನಾಡೋಲ್ಲ. ಈ ಸಂದರ್ಭದಲ್ಲಿ ಅದರ ಅವಶ್ಯಕತೆ ಇಲ್ಲ ಎಂದರು.

Exit mobile version