ಬಿಬಿಎಂಪಿ ಆಯುಕ್ತರಾಗಿ ಎನ್. ಮಂಜುನಾಥ್ ಪ್ರಸಾದ್ ನೇಮಕ

ಬೆಂಗಳೂರು: ಕೋವಿಡ್-19 ಪರಿಸ್ಥಿತಿ ನಿರ್ವಹಣೆಯಲ್ಲಿ ವೈಫಲ್ಯ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 
ಇವರ ಜಾಗಕ್ಕೆ ಎನ್. ಮಂಜುನಾಥ್ ಪ್ರಸಾದ್ ಅವರನ್ನು ಬಿಬಿಎಂಪಿಯ ನೂತನ ಕಮಿಷನರ್ ಆಗಿ ನೇಮಿಸಲಾಗಿದೆ. ಕೋವಿಡ್ ಪರಿಸ್ಥಿತಿ ನಿಯಂತ್ರಿಸುವಲ್ಲಿ ಅನಿಲ್​ ಕುಮಾರ್ ಅವರು ವೈಫಲ್ಯರಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ ಹೈಕೋರ್ಟ್‌ನಿಂದಲೂ ಬಿಬಿಎಂಪಿ ಕಾರ್ಯ ವೈಖರಿಗೆ ಚಾಟಿ ಬೀಸಿತ್ತು. ಈ ಕಾರಣಕ್ಕೆ ಅನಿಲ್ ಕುಮಾರ್ ಅವರನ್ನು ಆ ಸ್ಥಾನದಿಂದ ಎತ್ತಂಗಡಿ ಮಾಡಬೇಕು ಎನ್ನುವ ಮಾತು ಕೇಳಿ ಬಂದಿತ್ತು. ಅಲ್ಲದೆ, ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿ ಕೆಲಸ ಮಾಡಿದ್ದ ಕುಮಾರ ನಾಯಕ್ ಅವರನ್ನು ಬಿಬಿಎಂಪಿ ಆಯುಕ್ತರನ್ನಾಗಿ ನೇಮಿಸಲು ಚಿಂತನೆ ನಡೆದಿದೆ ಎನ್ನಲಾಗಿತ್ತು. ಆದರೆ, ಈ ಸ್ಥಾನಕ್ಕೆ ಈಗ ಎನ್. ಮಂಜುನಾಥ್ ಪ್ರಸಾದ್ ಅವರನ್ನು ನೂತನ ಕಮಿಷನರ್​ ಆಗಿ ನೇಮಕ ಮಾಡಲಾಗಿದೆ. ಅನಿಲ್ ಕುಮಾರ್ ಸಾರ್ವಜನಿಕ ಉದ್ದಿಮೆ ಅಪರ ಮುಖ್ಯ ಕಾರ್ಯದರ್ಶಿ ಆಗಿ ವರ್ಗಾವಣೆ ಮಾಡಲಾಗಿದೆ.

Exit mobile version