ಕೊಳ್ಳೇಗಾಲ, ಡಿ. 13: ಮದುವೆ ನಿರಾಕರಿಸಿದ್ದಕ್ಕೆ ಮನೆಯವರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಮಧುವನಹಳ್ಳಿ ಗ್ರಾಮದಲ್ಲಿ ಎರಡು ಪ್ರಕರಣದಲ್ಲಿ ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗ್ರಾಮದ ಆನಂದ್, ಬೆಂಗಳೂರಿನ ದೇವರಾಜು, ಗಿರೀಶ್ ಹಾಗೂ ಹನುಮಯಿ ಎಂಬವರನ್ನು ಬಂಧಿಸಲಾಗಿದೆ.
ಡಿ.೧೧ ರಂದು ಶಿವಮಲ್ಲು ಎಂಬಾತ ಹಲ್ಲೆ ಮಾಡಿ ಪರಾರಿಯಾಗಿದ್ದರು. ವಿಷಯ ತಿಳಿದು ಪೊಲೀಸರು ಆರೋಪಿಗಳ ಬೆನ್ನತ್ತಿ ಬೆಂಗಳೂರಿನಲ್ಲಿ ಅವಿತುಕೊಂಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮದುವೆಗೆ ನಿರಾಕರಿದ್ದ ತಾತಾ, ಮೊಮ್ಮಕ್ಕಳ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿಯು ಮತ್ತೆ ಮನೆಗೆ ಬಂದು ಯುವತಿ ತಂದೆ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿರುವ ಘಟನೆ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಬಸ್ ಚಾಲಕ ಶಿವಮಲ್ಲು ಹಲ್ಲೆಗೊಳಗಾದವರು.
ಡಿ.೯ ರಂದು ಮೊಮ್ಮಗಳನ್ನು ಮದುವೆ ಮಾಡಿಕೊಡಲು ನಿರಾಕರಣೆ ಮಾಡಿದ್ದಕ್ಕೆ ತಾತಾ ಹಾಗೂ ಮೊಮ್ಮಕ್ಕಳನ್ನು ಹಲ್ಲೆ ಮಾಡಿರುವ ಪ್ರಕರಣ ದಾಖಲಾಗಿತ್ತು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದರು. ಈ ವೇಳೆ ಕಾರಿನಲ್ಲಿ ತನ್ನ ನಾಲ್ಕು ಮಂದಿ ಸ್ನೇಹಿತರ ಜೊತೆ ಬಂದ ಆರೋಪಿಯು ತನ್ನ ಮನೆಯ ಎದುರು ಕುಳಿತಿದ್ದ ಶಿವಮಲ್ಲು ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.