ಮಾಜಿ ಸಿಎಂಗೆ ಮತ್ತೆ ಸಿಎಂ ಆಗುವ ಆಸೆ

ಬಾಗಲಕೋಟೆ,ಅ.20: ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನವನ್ನು ಬಿಜೆಪಿಯವರೇ ಮಾಡುತ್ತಿದ್ದಾರೆ. ಬಸವಗೌಡರ  ಕ್ಷೇತ್ರದ ಅನುದಾನ ಕಡಿತಗೊಂಡ ನಂತರ ಅವರಲ್ಲಿ ಅಸಮಾಧಾನವುಂಟಾಗಿದ್ದು, ಈಗ ಅವರಿಗೆ ಬಿಸಿ ಮುಟ್ಟಿದೆ. ಆದ್ದರಿಂದ ಸತ್ಯ ಹೇಳೋಕೆ ಶುರುಮಾಡಿದ್ದಾರೆ ಎಂದರು. ನಾನು ಮತ್ತೆ ಮುಖ್ಯಮಂತ್ರಿಯಾಗಿ ಆಯ್ಕೆಯಾದರೆ ಬಡವರಿಗೆ 10 ಕೆ.ಜಿ. ಅಕ್ಕಿ ವಿತರಣೆ ಮಾಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಡವರು ಹೊಟ್ಟೆ ತುಂಬ ಊಟ ಮಾಡಬೇಕು. ರಾಜ್ಯ ಸರ್ಕಾರ 7 ಕೆ.ಜಿ. ಅಕ್ಕಿ ಕೊಟ್ಟಿದ್ದರೆ ಅವರ ಗಂಟು ಹೋಗುತ್ತಿತ್ತಾ? ಒಂದು ವೇಳೆ ನಾನು ಮತ್ತೆ ಸಿಎಂ ಆದರೆ 10 ಕೆ.ಜಿ. ಅಕ್ಕಿ ಕೊಡುತ್ತೇನೆ ಎಂದು ಹೇಳುವ ಮೂಲಕ ಮತ್ತೆ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಕೆಳಗಿಳಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಅವರೇ ಪ್ರತಿಕ್ರಿಯೆ ನೀಡಬೇಕು. ನಾವು ಸರ್ಕಾರವನ್ನು ಬೀಳಿಸಲು ಹೋಗಲ್ಲ. ಬಿಜೆಪಿಯವರ ತಿಕ್ಕಾಟದಿಂದಾಗಿ ಸರ್ಕಾರ ಬಿದ್ದರೆ ನಾವು ಚುನಾವಣೆ ಎದುರಿಸಲು ಸಿದ್ಧ ಎಂದು ತಿಳಿಸಿದ್ದಾರೆ, ಮಾಜಿ ಸಿ ಎಂ ಸಿದ್ದರಾಮಯ್ಯರವರು.

 

Exit mobile version