ಮಾಜಿ ಸಿಎಂ ಬಗ್ಗೆ ಹೊಸ ಬಾಂಬ್ ಸಿಡಿಸಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್

ಕೋಲಾರ,ಆ.29: ಕಾಂಗ್ರೆಸ್‍ನ ಕಟ್ಟಾಳು ಎಂಬಂತೆ ಬೀಗುತ್ತಿರುವ ಸಿದ್ದರಾಮಯ್ಯಗೆ ಅದ್ಯಾಕೋ ಟೈಮ್ ಸರಿ ಇಲ್ಲ ಅನ್ನಿಸುತ್ತಿದೆ.. ನಂಬಿಕಸ್ತರು, ಆಪ್ತರು ಅಂದುಕೊಂಡಿದ್ದವರಿಂದಲೇ ಸಿದ್ದುಗೆ ಗುದ್ದು ಸಿಗುತ್ತಲೇ ಇದೆ..ಈಗ ಸಿದ್ದರಾಮಯ್ಯ ಆಪ್ತರ ಸಾಲಿನಲ್ಲಿದ್ದ ಕಾಂಗ್ರೆಸ್‍ನ ಅನರ್ಹ ಶಾಸಕ ಎಂಟಿಬಿ.ನಾಗರಾಜ್ ಸರದಿ..

ಕೋಲಾದರಲ್ಲಿ ಇಂದು [ಗುರುವಾರ] ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಟಿ.ಬಿ, ಡಿಎಸ್ ನಲ್ಲಿ ಅಧಿಕಾರ ಸಿಕ್ಕಿಲ್ಲ ಎಂದು ಸಿದ್ದರಾಮಯ್ಯ ಕಾಂಗ್ರೆಸ್ ಗೆ ಬಂದವರು. ಕಾಂಗ್ರೆಸ್ ಪಕ್ಷವನ್ನು ಸಿದ್ದರಾಮಯ್ಯ ಕಟ್ಟಿಲ್ಲ. ಕಾಂಗ್ರೆಸ್ ಕಟ್ಟಿದ್ದು ನಾವು ಎಂದು ಸಿದ್ದರಾಮಯ್ಯ ವಿರುದ್ಧವೇ  ವಾಗ್ದಾಳಿ ನಡೆಸಿದರು.

ಆಡಳಿತ ಅಧಿಕಾರ ವೈಪಲ್ಯಗಳಿಂದ ಬೇಸತ್ತು ಹೊರಗೆ ಬಂದಿದ್ದೇವೆ.  ಮೈತ್ರಿ ಸರ್ಕಾರದಲ್ಲಿ ಮಂತ್ರಿಯಾಗಿ ಏನು ಮಾಡಲಾಗುತ್ತಿಲ್ಲ.  ಉಪ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ಬಂದು ನನ್ನ ಕ್ಷೇತ್ರದಲ್ಲಿ ತಟ್ಟಲಿ ತೊಡೆ. ಇಂತಹ ತೊಡೆ ತಟ್ಟುವರನ್ನ ನಾನು ನೋಡಿದ್ದೇನೆ. ಮುಂದಿನ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಬಗ್ಗೆ ಹೇಳುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದರು.

ಕೊನೆಯದಾಗಿ ಎರಡು ಉದ್ದೇಶಗಳಿವೆ ಒಂದು ರಾಜಕೀಯ ನಿವೃತ್ತಿ,. ಇನ್ನೊಂದು ನನಗೆ ಯಾರ ಹಂಗೂ ಬೇಡ ಕಾರ್ಯಕರ್ತರ ಅಭಿಪ್ರಾಯದಿಂದ ಸ್ವತಂತ್ರವಾಗಿ ಸ್ಪರ್ದೆ ಮಾಡಲು ನಿರ್ಧರಿಸುತ್ತೇನೆ ಎಂದರು.

Exit mobile version