ರಾಜಕೀಯ ಬಿಕ್ಕಟ್ಟಿನ ನಡುವೆ ಆಡಿಯೋ ಟೇಪ್ ಕದ್ದಾಲಿಗೆ ಕಲಹ

ಜೈಪುರ್: ರಾಜಸ್ಥಾನದಲ್ಲಿ ಎದುರಾಗಿರುವ ರಾಜಕೀಯ ಬಿಕ್ಕಟ್ಟಿನ ನಡುವೆಯೇ ಇದೀಗ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆಡಿಯೋ ಟೇಪ್ ಕದ್ದಾಲಿಕೆ ಕೆಸರೆರಚಾಟ ಶುರುವಾಗಿದೆ. ಕೆಲವು ದಿನಗಳ ಹಿಂದೆ ಎದುರಾಗಿರುವ ರಾಜಕೀಯ ಬಿಕ್ಕಟ್ಟಿನ ಕಾರಣದಿಂದ ಆಡಿಯೋ ಟೇಪ್ ವಿಚಾರದಲ್ಲಿ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡಸಿತ್ತು. ಈ ಆರೋಪ ಎದುರಾದ ಬೆನ್ನಲ್ಲೇ ಬಿಜೆಪಿ ಕೂಡಾ ತಿರುಗೇಟು ನೀಡಿದೆ. ಒಂದು ವೇಳೆ ಗೆಹ್ಲೋಟ್ ಸರ್ಕಾರ ರಾಜಕಾರಣಿಗಳ ದೂರವಾಣಿ ಕದ್ದಾಲಿಸುವ ತಂತ್ರಗಾರಿಕೆಗೆ ಮೊರೆ ಹೋಗಿದ್ದರೆ ಅದು ಅಸಾಂವಿಧಾನಿಕ ಎಂದು ಹೇಳಿದೆ.
ಅಂತರ್ಜಾಲ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ರಾಜಸ್ಥಾನ ಕಾಂಗ್ರೆಸ್ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

Exit mobile version