ರಾಜನ್‌ ನಿಧನಕ್ಕೆ ಬಿಎಸ್‌ವ್ಐ ಸಂತಾಪ

ಬೆಂಗಳೂರು: ಹಿರಿಯ ಸಂಗೀತ ನಿರ್ದೇಶಕ ರಾಜನ್ ಅವರ ನಿಧನಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ಸೂಚಿಸಿದ್ದಾರೆ.

ಹೆಸರಾಂತ ಹಿರಿಯ ಸಂಗೀತ ನಿರ್ದೇಶಕ ಶ್ರೀ ರಾಜನ್ ಅವರು ನಿಧನರಾದ ಸುದ್ದಿ ತೀವ್ರ ಶೋಕವನ್ನುಂಟು ಮಾಡಿದೆ. ತಮ್ಮ ಸಹೋದರ ನಾಗೇಂದ್ರಪ್ಪ ಅವರೊಂದಿಗೆ ‘ರಾಜನ್‌-ನಾಗೇಂದ್ರ’ ಹೆಸರಿನಲ್ಲಿ ಜಂಟಿಯಾಗಿ ಅನೇಕ ಜನಪ್ರಿಯ, ಯಶಸ್ವಿ ಕನ್ನಡ ಚಿತ್ರಗಳಿಗೆ ಸಂಗೀತ ನೀಡಿದ್ದ ರಾಜನ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಅನಾಥವಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ತಮ್ಮ ನೂರಾರು ಸುಮಧುರ ಗೀತೆಗಳಿಗೆ ಹೆಸರುವಾಸಿಯಾದ ರಾಜನ್‌ ಚಿತ್ರರಸಿಕರು ಸದಾ ನೆನಪಿನಲ್ಲಿಡುತ್ತಾರೆ. ರಾಜನ್ ಅವರ ಆತ್ಮಕ್ಕೆ ಚಿರಶಾಂತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Exit mobile version