ರಾಜ್ಯದಲ್ಲಿ ಇಂದು ೧೦ ಕೊರೊನಾ ಪಾಸಿಟಿವ್ ಕೇಸ್ : ಸೋಂಕಿತರ ಸಂಖ್ಯೆ ೭೪ಕ್ಕೆ ಏರಿಕೆ

ಇಂದು ಒಂದೇ ದಿನ ರಾಜ್ಯದಲ್ಲಿ ೧೦ ಕೊರೋನಾ ಪಾಸಿಟಿವ್ ಕೇಸ್ ದೃಢವಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವಂತ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ. ಅಲ್ಲದೇ ಇದುವರೆಗೆ ಕೊರೊನಾ ಸೋಂಕಿನಿAದಾಗಿ ೩ ಬಲಿಯಾಗಿದ್ದರೇ, ೫ ಜನರು ಕೊರೊನಾ ಸೋಂಕಿನಿAದ ಗುಣಮುಖರಾಗಿರುವುದಾಗಿ ತಿಳಿಸಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು ಒಂದೇ ದಿನ ೧೦ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಅಲ್ಲದೇ ೩೬ನೇ ರೋಗಿಯ ಸಂಪರ್ಕದಲ್ಲಿದ್ದAತ ಮೂವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದಾಗಿ ರಿಪೋರ್ಟ್ ನಲ್ಲಿ ತಿಳಿಸಿದೆ. ಈ ಮೂಲಕ ರಾಜ್ಯದಲ್ಲಿ ೭೪ಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಶಾಕಿಂಗ್ ನ್ಯೂಸ್ ಅಂದ್ರೇ ಚಿಕ್ಕಬಳ್ಳಾಪುರದ ೧೯ನೇ ಕೊರೊನಾ ವೈರಸ್ ಸೋಂಕು ಪೀಡಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದAತ ೫ ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಅಲ್ಲದೇ ೨೫ನೇ ಸೋಂಕಿತರಿAದ ಅವರ ಮಗನಿಗೂ ಇಂದು ಕೊರೊನಾ ವೈರಸ್ ಸೋಂಕು ತಗುಲಿರುವುದಾಗಿ ದೃಢಪಟ್ಟಿದೆ.

Exit mobile version