ರಾಜ್ಯದಲ್ಲಿ ಟ್ರ್ಯಾಕ್ಟರ್‌ ಏರಲಿದ್ದರಾ ರಾಹುಲ್‌?

ದಾವಣಗೆರೆ, ಅ.20: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್‌ 7 ಮತ್ತು 8 ರಂದು ರಾಜ್ಯದಲ್ಲಿ ನಡೆಸಲಿದ್ದಾರೆ ಎಂದು ಕಿಸಾನ್‌ ಕಾಂಗ್ರೆಸ್‌ ಘಟಕದ ರಾಜ್ಯಾಧ್ಯಕ್ಷ ಸಚಿನ್‌ ಮಿಗಾ ತಿಳಿಸಿದ್ದಾರೆ.

ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ವಿದ್ಯುತ್‌ ಕಾಯ್ದೆ ವಿರುದ್ಧ ರಾಹುಲ್‌ ಗಾಂಧಿ ಅವರು ಪಂಜಾಬ್‌ ಮಾದರಿಯಲ್ಲೇ ಕರ್ನಾಟಕದಲ್ಲೂ ಟ್ರ್ಯಾಕ್ಟರ್‌ ರ‍್ಯಾಲಿ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ರೈತ ವಿರೋಧಿ ನೀತಿ ಖಂಡಿಸಿ ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಸಹಿ ಸಂಗ್ರಹ ಚಳವಳಿ ನಡೆಸಲಾಗುವುದು. ಸಹಿ ಸಂಗ್ರಹ ಚಳವಳಿ ಹುಬ್ಬಳ್ಳಿಯಿಂದ ಹುಳಿಯಾರ್‌ ಮೂಲಕ ಬೆಳಗಾವಿಗೆ ಮತ್ತು ದಾವಣಗೆರೆಯಿಂದ ಚನ್ನಗಿರಿ ಮೂಲಕ ಶಿವಮೊಗ್ಗ ಜಿಲ್ಲೆಯ ಕಾಗೋಡು ತಲುಪುವುದು. ಈ ಎರಡು ಮಾರ್ಗಗಳಲ್ಲಿ ಒಂದನ್ನು ರಾಹುಲ್‌ ಗಾಂಧಿ ಅವರು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಅವರು ಇವೆರಡರಲ್ಲಿ ಒಂದು ಮಾರ್ಗವನ್ನು ಅಂತಿಮಗೊಳಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Exit mobile version