ರೈತರಿಗೆ ಮಹತ್ವದ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ನವದೆಹಲಿ, ಅ. 20: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಸಂಬಂಧಿಸಿದಂತೆ ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದೆ.

ಕೇಂದ್ರ ಸರ್ಕಾರವು ಈ ಯೋಜನೆಯಲ್ಲಿ ಖಾತೆ ಹೊಂದಿರುವ ರೈತರು ಹಣ ವರ್ಗಾವಣೆಯಾಗಿಲ್ಲವೆಂದಾದರೆ ಅದರ ಬಗ್ಗೆ ಮಾಹಿತಿ ಪಡೆದುಕೊಳ್ಳಲು  ಹೊಸ ಮಾರ್ಗವನ್ನು ಜಾರಿಗೆ ತಂದಿದೆ.

ಕಿಸಾನ್ ಸಮ್ಮಾನ್ ನಿಧಿಯಲ್ಲಿ ಖಾತೆ ಹೊಂದಿರುವ ರೈತರು ಪಿಎಂ ಕಿಸಾನ್ ಕ್ರೆಡಿಟ್ ಪೋರ್ಟಲ್‌ಗೆ ಲೊಗಿನ ಆಗಿ ಅಲ್ಲಿ ಆಧಾರ್, ಮೊಬೈಲ್, ಬ್ಯಾಂಕ್ ಖಾತೆ ನಂಬರ್ ನೋಂದಾಯಿಸಿ ಮಾಹಿತಿ ಪಡೆದುಕೊಳ್ಬಬಹುದಾಗಿದೆ. ಈ ಯೋಜನೆಯಲ್ಲಿ ಹೆಸರು ನೋಂದಾಯಿಸಲು ರೈತರು ಅಧಿಕಾರಿಗಳ ಬಳಿ ಹೋಗಬೇಕಾಗಿಲ್ಲ. ಕಿಸಾನ್ ಪೋರ್ಟಲ್‌ಗೆ ಹೋಗಿ ಸುಲಭ ರೀತಿಯಲ್ಲಿ ಹೆಸರು ನೋಂದಾಯಿಸಬಹುದಾಗಿದೆ.

ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಿಂದ ಪ್ರತಿ ವರ್ಷ 6 ಸಾವಿರ ರೂ. ಪಡೆಯುತ್ತಿರುವ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಿಸಲು ನಿರ್ಧರಿಸಿದೆ.

Exit mobile version